Latest

ಗಾಯಕ ʻಸೋನು ನಿಗಮ್ʼ ಮೇಲೆ ಶಾಸಕನ ಪುತ್ರನಿಂದ ಹಲ್ಲೆ!

ಸೋಮವಾರ ಸಂಜೆ ಮುಂಬೈನ ಚೆಂಬೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಶಾಸಕ ಪ್ರಕಾಶ್ ಫಟರ್ಪೇಕರ್ ಅವರ ಪುತ್ರ ಸ್ವಪ್ನಿಲ್ ಫಟರ್ಪೇಕರ್ ಅವರು ಗಾಯಕ ಸೋನು ನಿಗಮ್ ಮತ್ತು ಅವರ ತಂಡದ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಚಾರವಾಗಿ ಠಾಣೆ ಮೆಟ್ಟಿಲೇರಿರುವ ಸೋನಾ ನಿಗಮ್ ದೂರು ದಾಖಲಿಸಿದ್ದಾರೆ.
ಶಿವಸೇನಾ ನಾಯಕ ಪ್ರಕಾಶ್ ಫಾಟರ್‌ಪೇಕರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋನು ನಿಗಮ್ ಚೆಂಬೂರ್‌ಗೆ ಬಂದಿದ್ದರು. ಸೋನು ನಿಗಮ್ ವೇದಿಕೆಯಿಂದ ಕೆಳಗೆ ಹೋಗುತ್ತಿದ್ದಾಗ ಕೆಲವರು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಆ ವೇಳೆ, ಅವರ ಅಂಗರಕ್ಷಕರು ಆ ಜನರನ್ನು ತಳ್ಳಲು ಪ್ರಯತ್ನಿಸಿದರು. ಆದರೆ, ತಪ್ಪಾಗಿ ಸೋನು ನಿಗಮ್ ತಂಡದ ಒಬ್ಬ ವ್ಯಕ್ತಿಯನ್ನು ತಪ್ಪಾಗಿ ತಳ್ಳಲಾಯಿತು. ಅವರಿಗೆ ಏನೂ ಆಗಿಲ್ಲ’ ಎಂದು ಶಿವಸೇನೆ ನಾಯಕ ಪ್ರಕಾಶ್ ಫಾಟರ್‌ಪೇಕರ್ ಹೇಳಿದ್ದಾರೆ.
ಸೋನು ನಿಗಮ್ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಶಾಸಕ ಫಾಟರ್‌ಪೇಕರ್ ಅವರ ಪುತ್ರ ಮೊದಲು ಸೋನು ನಿಗಮ್ ಅವರ ಅಂಗರಕ್ಷಕ ಹರಿ ಅವರನ್ನು ತಳ್ಳಿ ನಂತರ, ಸೋನು ಅವರನ್ನು ತಳ್ಳಿದ್ದಾರೆ. ಈ ಸಮಾರಂಭದಲ್ಲಿ ಸೋನು ನಿಗಮ್ ಅವರ ಸ್ನೇಹಿತ ರಬ್ಬಾನಿ ಖಾನ್ ಕೂಡ ಉಪಸ್ಥಿತರಿದ್ದರು. ಮಾತಿನ ಚಕಮಕಿಯಲ್ಲಿ ರಬ್ಬಾನಿ ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ. ಅವರಿಗೆ ಹಲವು ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚೆಂಬೂರಿನ ಝೆನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಇಡೀ ಘಟನೆಯಿಂದ ಸೋನು ನಿಗಮ್ ಕಂಬನಿ ಮಿಡಿದಿದ್ದಾರೆ. ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ. ರಬ್ಬಾನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

1 hour ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

1 hour ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

2 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

2 hours ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

2 hours ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

2 hours ago