Latest

ಗಾಯಕ ʻಸೋನು ನಿಗಮ್ʼ ಮೇಲೆ ಶಾಸಕನ ಪುತ್ರನಿಂದ ಹಲ್ಲೆ!

ಸೋಮವಾರ ಸಂಜೆ ಮುಂಬೈನ ಚೆಂಬೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಶಾಸಕ ಪ್ರಕಾಶ್ ಫಟರ್ಪೇಕರ್ ಅವರ ಪುತ್ರ ಸ್ವಪ್ನಿಲ್ ಫಟರ್ಪೇಕರ್ ಅವರು ಗಾಯಕ ಸೋನು ನಿಗಮ್ ಮತ್ತು ಅವರ ತಂಡದ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಚಾರವಾಗಿ ಠಾಣೆ ಮೆಟ್ಟಿಲೇರಿರುವ ಸೋನಾ ನಿಗಮ್ ದೂರು ದಾಖಲಿಸಿದ್ದಾರೆ.
ಶಿವಸೇನಾ ನಾಯಕ ಪ್ರಕಾಶ್ ಫಾಟರ್‌ಪೇಕರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋನು ನಿಗಮ್ ಚೆಂಬೂರ್‌ಗೆ ಬಂದಿದ್ದರು. ಸೋನು ನಿಗಮ್ ವೇದಿಕೆಯಿಂದ ಕೆಳಗೆ ಹೋಗುತ್ತಿದ್ದಾಗ ಕೆಲವರು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಆ ವೇಳೆ, ಅವರ ಅಂಗರಕ್ಷಕರು ಆ ಜನರನ್ನು ತಳ್ಳಲು ಪ್ರಯತ್ನಿಸಿದರು. ಆದರೆ, ತಪ್ಪಾಗಿ ಸೋನು ನಿಗಮ್ ತಂಡದ ಒಬ್ಬ ವ್ಯಕ್ತಿಯನ್ನು ತಪ್ಪಾಗಿ ತಳ್ಳಲಾಯಿತು. ಅವರಿಗೆ ಏನೂ ಆಗಿಲ್ಲ’ ಎಂದು ಶಿವಸೇನೆ ನಾಯಕ ಪ್ರಕಾಶ್ ಫಾಟರ್‌ಪೇಕರ್ ಹೇಳಿದ್ದಾರೆ.
ಸೋನು ನಿಗಮ್ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಶಾಸಕ ಫಾಟರ್‌ಪೇಕರ್ ಅವರ ಪುತ್ರ ಮೊದಲು ಸೋನು ನಿಗಮ್ ಅವರ ಅಂಗರಕ್ಷಕ ಹರಿ ಅವರನ್ನು ತಳ್ಳಿ ನಂತರ, ಸೋನು ಅವರನ್ನು ತಳ್ಳಿದ್ದಾರೆ. ಈ ಸಮಾರಂಭದಲ್ಲಿ ಸೋನು ನಿಗಮ್ ಅವರ ಸ್ನೇಹಿತ ರಬ್ಬಾನಿ ಖಾನ್ ಕೂಡ ಉಪಸ್ಥಿತರಿದ್ದರು. ಮಾತಿನ ಚಕಮಕಿಯಲ್ಲಿ ರಬ್ಬಾನಿ ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ. ಅವರಿಗೆ ಹಲವು ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚೆಂಬೂರಿನ ಝೆನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಇಡೀ ಘಟನೆಯಿಂದ ಸೋನು ನಿಗಮ್ ಕಂಬನಿ ಮಿಡಿದಿದ್ದಾರೆ. ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ. ರಬ್ಬಾನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago