Latest

ಗಾಯಕ ʻಸೋನು ನಿಗಮ್ʼ ಮೇಲೆ ಶಾಸಕನ ಪುತ್ರನಿಂದ ಹಲ್ಲೆ!

ಸೋಮವಾರ ಸಂಜೆ ಮುಂಬೈನ ಚೆಂಬೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಶಾಸಕ ಪ್ರಕಾಶ್ ಫಟರ್ಪೇಕರ್ ಅವರ ಪುತ್ರ ಸ್ವಪ್ನಿಲ್ ಫಟರ್ಪೇಕರ್ ಅವರು ಗಾಯಕ ಸೋನು ನಿಗಮ್ ಮತ್ತು ಅವರ ತಂಡದ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಚಾರವಾಗಿ ಠಾಣೆ ಮೆಟ್ಟಿಲೇರಿರುವ ಸೋನಾ ನಿಗಮ್ ದೂರು ದಾಖಲಿಸಿದ್ದಾರೆ.
ಶಿವಸೇನಾ ನಾಯಕ ಪ್ರಕಾಶ್ ಫಾಟರ್‌ಪೇಕರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋನು ನಿಗಮ್ ಚೆಂಬೂರ್‌ಗೆ ಬಂದಿದ್ದರು. ಸೋನು ನಿಗಮ್ ವೇದಿಕೆಯಿಂದ ಕೆಳಗೆ ಹೋಗುತ್ತಿದ್ದಾಗ ಕೆಲವರು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಆ ವೇಳೆ, ಅವರ ಅಂಗರಕ್ಷಕರು ಆ ಜನರನ್ನು ತಳ್ಳಲು ಪ್ರಯತ್ನಿಸಿದರು. ಆದರೆ, ತಪ್ಪಾಗಿ ಸೋನು ನಿಗಮ್ ತಂಡದ ಒಬ್ಬ ವ್ಯಕ್ತಿಯನ್ನು ತಪ್ಪಾಗಿ ತಳ್ಳಲಾಯಿತು. ಅವರಿಗೆ ಏನೂ ಆಗಿಲ್ಲ’ ಎಂದು ಶಿವಸೇನೆ ನಾಯಕ ಪ್ರಕಾಶ್ ಫಾಟರ್‌ಪೇಕರ್ ಹೇಳಿದ್ದಾರೆ.
ಸೋನು ನಿಗಮ್ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಶಾಸಕ ಫಾಟರ್‌ಪೇಕರ್ ಅವರ ಪುತ್ರ ಮೊದಲು ಸೋನು ನಿಗಮ್ ಅವರ ಅಂಗರಕ್ಷಕ ಹರಿ ಅವರನ್ನು ತಳ್ಳಿ ನಂತರ, ಸೋನು ಅವರನ್ನು ತಳ್ಳಿದ್ದಾರೆ. ಈ ಸಮಾರಂಭದಲ್ಲಿ ಸೋನು ನಿಗಮ್ ಅವರ ಸ್ನೇಹಿತ ರಬ್ಬಾನಿ ಖಾನ್ ಕೂಡ ಉಪಸ್ಥಿತರಿದ್ದರು. ಮಾತಿನ ಚಕಮಕಿಯಲ್ಲಿ ರಬ್ಬಾನಿ ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ. ಅವರಿಗೆ ಹಲವು ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚೆಂಬೂರಿನ ಝೆನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಇಡೀ ಘಟನೆಯಿಂದ ಸೋನು ನಿಗಮ್ ಕಂಬನಿ ಮಿಡಿದಿದ್ದಾರೆ. ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ. ರಬ್ಬಾನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಭ್ರಷ್ಟರ ಬೇಟೆ

Recent Posts

ಕೇಕ್ ಹಚ್ಚಿದ ಗಲಾಟೆ ರಕ್ತಪಾತಕ್ಕೆ: ಹುಟ್ಟುಹಬ್ಬದ ಪಾರ್ಟಿ ಮೂರು ಯುವಕರ ಸಾವಿನಲ್ಲಿ ಅಂತ್ಯ

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…

7 hours ago

ಮಧ್ಯಪ್ರದೇಶದಲ್ಲಿ ಅಧಿಕಾರ ದರ್ಪ: ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ – ಸಚಿವನ ಸಹೋದರ ವಿರುದ್ಧ ಗಂಭೀರ ಆರೋಪ

ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…

8 hours ago

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಬೆಚ್ಚಿ ಬೀಳಿಸುವ ಕಥೆ ಹೇಳಿದ ಯುವತಿ..!

ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…

8 hours ago

ಚಲಿಸುತ್ತಿದ್ದ ರೈಲಿನಿಂದ ಮಗು ಬಿದ್ದು ದುರಂತ: ಚೈನ್ ಎಳೆದರೂ ನಿಲ್ಲದ ರೈಲು, ತಾಯಿಯ ಕಣ್ಣೀರಿನ ಅಳಲು

ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…

8 hours ago

SSC 2026 ಭರ್ಜರಿ ನೇಮಕಾತಿ: 3,734 ಹುದ್ದೆಗಳು – ಮೇ 4ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…

13 hours ago

ನಿಶ್ಚಿತಾರ್ಥದ ದಿನವೇ ಯುವತಿ ನಾಪತ್ತೆ: ಮುಸ್ಲಿಂ ಯುವಕನೊಂದಿಗೆ ಪರಾರಿ? ಕುಟುಂಬಸ್ಥರ ಆಕ್ರೋಶ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…

14 hours ago