ಗದಗ ಜಿಲ್ಲೆಯಲ್ಲಿ ಸರಣಿ ಕಳ್ಳತನ ನಡೆದಿದ್ದು, ಖದೀಮರು ಒಂದೇ ರಾತ್ರಿ ಮೂರು ಗ್ರಾಮಗಳಲ್ಲಿ ಐದು ಕಡೆ ಸಿನಿಮೀಯ ಶೈಲಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆ ಶಿರಹಟ್ಟಿ ಮತ್ತು ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆದಿದೆ. ಕಳ್ಳತನ ನಡೆಸಿದವರು ನಾಲ್ಕಾರು ಜನರ ತಂಡವಾಗಿರುವ ಶಂಕೆ ವ್ಯಕ್ತವಾಗಿದೆ.
ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ, ಬನ್ನಿಕೊಪ್ಪ ಗ್ರಾಮಗಳು ಮತ್ತು ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಬೆಳ್ಳಟ್ಟಿ ಗ್ರಾಮದಲ್ಲಿ ಎಗ್ ರೈಸ್ ಅಂಗಡಿ ಮತ್ತು ಪಾನ್ ಶಾಪ್, ಬನ್ನಿಕೊಪ್ಪ ಗ್ರಾಮದಲ್ಲಿ ಎರಡು ಪಾನ್ ಶಾಪ್, ಹಾಗೂ ಬಾಗೇವಾಡಿ ಗ್ರಾಮದಲ್ಲಿ ಮನೆ ಕದ್ದಿರುವ ಘಟನೆಗಳು ನಡೆದಿವೆ. ಕಳ್ಳರು ಮನೆಮಾಲಿಕರಿಂದ 50 ಗ್ರಾಂ ಬಂಗಾರ ಆಭರಣ, ಸುಮಾರು 100 ಗ್ರಾಂ ಬೆಳ್ಳಿ ವಸ್ತುಗಳು, ಸೀರೆಗಳು ಮತ್ತು ಇತರೆ ವಸ್ತುಗಳನ್ನು ಕದ್ದೊಯ್ದಿದ್ದಾರೆ.
ಕಡಕೋಳ ಗ್ರಾಮದಲ್ಲಿ ಕಳ್ಳತನಕ್ಕೆ ಯತ್ನಿಸಿದರೂ, ಅದು ವಿಫಲವಾಗಿದೆ. ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಹಟ್ಟಿ ಮತ್ತು ಮುಂಡರಗಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಕಳ್ಳರ ಪತ್ತೆಗೆ ತನಿಖೆ ಮುಂದುವರಿದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…