Latest

ಕೇಕ್ ಕತ್ತರಿಸುವ ಚಾಕುವಿನಲ್ಲಿ ಸ್ನೇಹಿತನ ಕತ್ತು ಕೊಯ್ದ ಪಾಪಿ.

ಚಿಂತಾಮಣಿ: ಬರ್ತಡೆ ಪಾರ್ಟಿಗೆ ಎಂದು ಯುವಕ ನನ್ನು ಕರೆಸಿಕೊಂಡು ಕಂಟಪೂರ್ತಿ ಕುಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
ದುರ್ಗೇಶ್ ಅಲಿಯಾಸ್ ಚಿನ್ನಿ ಎಂಬ ಯುವಕ ಚಿಂತಾಮಣಿಯ ಅಂಜನಿ ಬಡಾವಣೆಯ ನಿವಾಸಿಯಾಗಿರುತ್ತಾನೆ. ಹೇಮಂತ್ ಎಂಬ ಯುವಕನ ಬರ್ತಡೇ ಪಾರ್ಟಿಯನ್ನು ಚಿಂತಾಮಣಿಯ ಕಣ್ಣಂಪಲ್ಲಿ ಬಳಿ ಇರುವ ನಿರ್ಜನ ಪ್ರದೇಶದಲ್ಲಿ ಆಯೋಜಿಸಿಕೊಂಡಿರುತ್ತಾರೆ ಆ ಸ್ಥಳಕ್ಕೆ ದುರ್ಗೇಶನನ್ನು ಕರೆದೊಗಿರುತ್ತಾರೆ.
ದುರ್ಗೇಶ್ ಮತ್ತು ಹೇಮಂತನಿಗೆ ಹಳೆಯ ವೈಶ್ಯಮ್ಯವಿರುತ್ತದೆ ಆದರೂ ಸಹ ಎಲ್ಲವನ್ನು ಮರೆತು ಬರ್ತಡೇ ಪಾರ್ಟಿಗೆ ಎಂದು ಹೋಗಿರುತ್ತಾರೆ ಆ ಸಂದರ್ಭದಲ್ಲಿ ಶರತ್ ಮಧು ಮಹೇಶ್ ಸೇರಿದಂತೆ ದುರ್ಗೇಶನು ಸಹ ಕಂಠಪೂರ್ತಿ ಕುಡಿದಿರುತ್ತಾರೆ.
ಗುರಾಯಿಸುತ್ತಿದ್ದಾನೆ ಎಂಬ ವಿಚಾರಕ್ಕೆ ಸ್ನೇಹಿತರ ಮಧ್ಯೆ ಜಗಳ ಉಂಟಾಗಿದೆ ಮೊದಲೇ ಹೇಮಂತ ಮತ್ತು ದುರ್ಗೇಶನ ಮಧ್ಯೆ ಹಳೆಯ ವೈಶ್ಯಮ್ಯ ಇದ್ದ ಕಾರಣ ಇದೇ ಸಂದರ್ಭವನ್ನು ಬಳಸಿಕೊಂಡ ಬರ್ತಡೆ ಬಾಯಿ ಹೇಮಂತ ಕೇಕ್ ಕತ್ತರಿಸಲು ತಂದಿದಂತಹ ಚಾಕುವಿನಿಂದ ದುರ್ಗೇಶನ ಕತ್ತು ಕೊಯ್ದಿದ್ದಾನೆ. ಈ ಸಂದರ್ಭದಲ್ಲಿ ಜೊತೆಗಿದ್ದ ಶರತ್, ಮಧು, ಮಹೇಶ್, ಹೇಮಂತನಿಗೆ ಸಾತ್ ನೀಡಿದ್ದಾರೆ.
ಘಟನೆ ನಡೆದ ಮುಂದಿನ ದಿನ ವಿಚಾರ ಬೆಳಕೆಗೆ ಬಂದಿದೆ.


ಕೊಲೆ ಮಾಡಿರುವಂತಹ ಆರೋಪಿಗಳು ತಮಗೇನು ತಿಳಿಯದಂತೆ ಅಮಾಯಕರ ರೀತಿ ವರ್ತಿಸಿದ್ದಾರೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇವರನ್ನು ತನಿಖೆಗೆ ಒಳಪಡಿಸಿದ ನಂತರ ಈ ಎಲ್ಲಾ ವಿಚಾರಗಳು ಹೊರಬಂದಿವೆ.
ಬರ್ತಡೆಗೆ ಎಂದು ಕರೆಸಿಕೊಂಡು ಸ್ನೇಹಿತನ ಕತ್ತು ಕೊಯ್ದ ನಾಲ್ವರು ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

11 hours ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago