ಚಿಂತಾಮಣಿ: ಬರ್ತಡೆ ಪಾರ್ಟಿಗೆ ಎಂದು ಯುವಕ ನನ್ನು ಕರೆಸಿಕೊಂಡು ಕಂಟಪೂರ್ತಿ ಕುಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
ದುರ್ಗೇಶ್ ಅಲಿಯಾಸ್ ಚಿನ್ನಿ ಎಂಬ ಯುವಕ ಚಿಂತಾಮಣಿಯ ಅಂಜನಿ ಬಡಾವಣೆಯ ನಿವಾಸಿಯಾಗಿರುತ್ತಾನೆ. ಹೇಮಂತ್ ಎಂಬ ಯುವಕನ ಬರ್ತಡೇ ಪಾರ್ಟಿಯನ್ನು ಚಿಂತಾಮಣಿಯ ಕಣ್ಣಂಪಲ್ಲಿ ಬಳಿ ಇರುವ ನಿರ್ಜನ ಪ್ರದೇಶದಲ್ಲಿ ಆಯೋಜಿಸಿಕೊಂಡಿರುತ್ತಾರೆ ಆ ಸ್ಥಳಕ್ಕೆ ದುರ್ಗೇಶನನ್ನು ಕರೆದೊಗಿರುತ್ತಾರೆ.
ದುರ್ಗೇಶ್ ಮತ್ತು ಹೇಮಂತನಿಗೆ ಹಳೆಯ ವೈಶ್ಯಮ್ಯವಿರುತ್ತದೆ ಆದರೂ ಸಹ ಎಲ್ಲವನ್ನು ಮರೆತು ಬರ್ತಡೇ ಪಾರ್ಟಿಗೆ ಎಂದು ಹೋಗಿರುತ್ತಾರೆ ಆ ಸಂದರ್ಭದಲ್ಲಿ ಶರತ್ ಮಧು ಮಹೇಶ್ ಸೇರಿದಂತೆ ದುರ್ಗೇಶನು ಸಹ ಕಂಠಪೂರ್ತಿ ಕುಡಿದಿರುತ್ತಾರೆ.
ಗುರಾಯಿಸುತ್ತಿದ್ದಾನೆ ಎಂಬ ವಿಚಾರಕ್ಕೆ ಸ್ನೇಹಿತರ ಮಧ್ಯೆ ಜಗಳ ಉಂಟಾಗಿದೆ ಮೊದಲೇ ಹೇಮಂತ ಮತ್ತು ದುರ್ಗೇಶನ ಮಧ್ಯೆ ಹಳೆಯ ವೈಶ್ಯಮ್ಯ ಇದ್ದ ಕಾರಣ ಇದೇ ಸಂದರ್ಭವನ್ನು ಬಳಸಿಕೊಂಡ ಬರ್ತಡೆ ಬಾಯಿ ಹೇಮಂತ ಕೇಕ್ ಕತ್ತರಿಸಲು ತಂದಿದಂತಹ ಚಾಕುವಿನಿಂದ ದುರ್ಗೇಶನ ಕತ್ತು ಕೊಯ್ದಿದ್ದಾನೆ. ಈ ಸಂದರ್ಭದಲ್ಲಿ ಜೊತೆಗಿದ್ದ ಶರತ್, ಮಧು, ಮಹೇಶ್, ಹೇಮಂತನಿಗೆ ಸಾತ್ ನೀಡಿದ್ದಾರೆ.
ಘಟನೆ ನಡೆದ ಮುಂದಿನ ದಿನ ವಿಚಾರ ಬೆಳಕೆಗೆ ಬಂದಿದೆ.
ಕೊಲೆ ಮಾಡಿರುವಂತಹ ಆರೋಪಿಗಳು ತಮಗೇನು ತಿಳಿಯದಂತೆ ಅಮಾಯಕರ ರೀತಿ ವರ್ತಿಸಿದ್ದಾರೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇವರನ್ನು ತನಿಖೆಗೆ ಒಳಪಡಿಸಿದ ನಂತರ ಈ ಎಲ್ಲಾ ವಿಚಾರಗಳು ಹೊರಬಂದಿವೆ.
ಬರ್ತಡೆಗೆ ಎಂದು ಕರೆಸಿಕೊಂಡು ಸ್ನೇಹಿತನ ಕತ್ತು ಕೊಯ್ದ ನಾಲ್ವರು ಈಗ ಪೊಲೀಸರ ಅತಿಥಿಯಾಗಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…