Categories: CrimeLatest

ನಾಳೆ 2ನೇ ಮದುವೆಯಾಗಬೇಕಿದ್ದ ಶಿರಸಿ ಆಯುರ್ವೇದ ವೈದ್ಯರ ಕ್ರೂರ ಹತ್ಯೆ..!

ಶಿರಸಿ: ನಗರದ ಕೆಎಚ್‌ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್ ಎಫ್. ಕಲ್ಗುಟ್ಕರ್ ಅವರನ್ನು ಅಜ್ಞಾತ ವ್ಯಕ್ತಿಗಳು ಕ್ರೂರವಾಗಿ ಹತ್ಯೆಗೈದಿರುವುದು ಪತ್ತೆಯಾಗಿದೆ.

ಇಂದು ಬೆಳಿಗ್ಗೆ ಸಂಬಂಧಿಕರು ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ, ವೈದ್ಯರು ರಕ್ತದ ಮಡುವಿನಲ್ಲಿ ಮೃತ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮತ್ತು ಭೀತಿಯ ವಾತಾವರಣವನ್ನು ಉಂಟುಮಾಡಿದೆ.

ಡಾ. ರಮೇಶ್ ಅವರು ಹುಬ್ಬಳ್ಳಿ ರಸ್ತೆಯಲ್ಲಿ ಆಯುರ್ವೇದ ಕ್ಲಿನಿಕ್ ನಡೆಸುತ್ತಿದ್ದು, ಸಮಾಜದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಗಮನಾರ್ಹ ಸಂಗತಿಯೆಂದರೆ, ಸುಮಾರು ಆರು ತಿಂಗಳ ಹಿಂದೆ ಅವರ ಪತ್ನಿ ನಿಧನ ಹೊಂದಿದ್ದು, ಇತ್ತೀಚೆಗೆ ಅವರು ಮರು ವಿವಾಹಕ್ಕೆ ಸಿದ್ಧರಾಗಿದ್ದರು. ನಾಳೆ (ಸೋಮವಾರ) ತಾಲೂಕಿನ ಮಂಜುಗುಣಿಯಲ್ಲಿ ಅವರ ವಿವಾಹ ನಡೆಯಬೇಕಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಸಂಶಯಾಸ್ಪದವಾಗಿದ್ದು, ಹತ್ಯೆಗೆ ವೈಯಕ್ತಿಕ ಕಾರಣಗಳಿವೆಯೇ ಅಥವಾ ಬೇರೆ ಯಾವುದೇ ಅಂಶಗಳಿವೆಯೇ ಎಂಬುದನ್ನು ಪೊಲೀಸರು ವಿವಿಧ ಆಯಾಮಗಳಲ್ಲಿ ಪರಿಶೀಲಿಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗೀತಾ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

16 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

16 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

16 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

16 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

16 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

16 hours ago