Categories: CrimeLatest

ಶಿರಸಿ ವೈದ್ಯನ ಕೊಲೆ ರಹಸ್ಯ ಬಯಲು: ಮದುವೆ ಮುನ್ನವೇ ಸ್ನೇಹಿತನಿಂದ ಕ್ರೂರ ಹತ್ಯೆ.!

ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಕೆಎಚ್‌ಬಿ ಕಾಲೋನಿಯ ಹೊಸ ಬಡಾವಣೆಯಲ್ಲಿ ವಾಸವಿದ್ದ ಡಾ. ರಮೇಶ್ ಎಫ್. ಕಲ್ಗುಟ್ಕರ್ ಅವರನ್ನು ಶನಿವಾರ ರಾತ್ರಿ ಕ್ರೂರವಾಗಿ ಹತ್ಯೆ ಮಾಡಲಾಗಿತ್ತು. ಅವರು ಹುಬ್ಬಳ್ಳಿ ರಸ್ತೆಯಲ್ಲಿ ಆಯುರ್ವೇದಿಕ್ ಕ್ಲಿನಿಕ್ ನಡೆಸುತ್ತಿದ್ದರು.

ಐದು ತಿಂಗಳ ಹಿಂದೆ ಪತ್ನಿಯನ್ನು ಹೃದಯಾಘಾತದಿಂದ ಕಳೆದುಕೊಂಡಿದ್ದ ಡಾ. ರಮೇಶ್, ಬಳಿಕ ಪತ್ನಿಯ ತಂಗಿಯೊಂದಿಗೆ ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು. ಮಂಜಗುಣಿ ದೇವಸ್ಥಾನದಲ್ಲಿ ಮದುವೆ ನಿಗದಿಯಾಗಿದ್ದು, ಕೇವಲ ಒಂದು ದಿನ ಬಾಕಿ ಇರುವಾಗಲೇ ಈ ದುರ್ಘಟನೆ ನಡೆದಿದೆ.

ಭಾನುವಾರ ಬೆಳಿಗ್ಗೆ ಸಂಬಂಧಿಕರು ಮನೆಗೆ ಭೇಟಿ ನೀಡಿದಾಗ, ವೈದ್ಯರ ಮೃತದೇಹ ಪತ್ತೆಯಾಗಿದ್ದು, ತಕ್ಷಣ ಶಿರಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವೇಗವಾಗಿ ತನಿಖೆ ನಡೆಸಿ, ಕೊಲೆ ಹಿಂದೆ ಹಣದ ಆಸೆ ಇದ್ದಿರುವುದನ್ನು ಪತ್ತೆಹಚ್ಚಿದ್ದಾರೆ. ಮದುವೆಗಾಗಿ ಡಾ. ರಮೇಶ್ ಚಿನ್ನಾಭರಣ ಖರೀದಿಸಿದ್ದ ವಿಚಾರ ತಿಳಿದಿದ್ದ ಸ್ನೇಹಿತನೇ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

ಆರೋಪಿ ಬಂಧನ, ₹15 ಲಕ್ಷ ಮೌಲ್ಯದ ಚಿನ್ನಾಭರಣ ವಶ


ದಿನಾಂಕ 19ರಂದು ನಡೆದಿದ್ದ ಈ ಕ್ರೂರ ಹತ್ಯೆ ಪ್ರಕರಣದಲ್ಲಿ ಮಂಜುನಾಥ ಪಿ.ಎಲ್ (70), ಪಡುಬೈಲ್ ಮಳಲೂರು (ಶಿವಮೊಗ್ಗ) ನಿವಾಸಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ ಸುಮಾರು ₹15 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹50,000 ನಗದು ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಮತ್ತು ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ನಡೆಸಲಾಗಿದ್ದು, ಡಿವೈಎಸ್ಪಿ ಗೀತಾ ಪಾಟೀಲ್, ಸಿಪಿಐ ಶಶಿಕಾಂತ್ ವರ್ಮ ಹಾಗೂ ಪಿಐ ರಮೇಶ್ ಹೂಗಾರ್ ಮಾರ್ಗದರ್ಶನ ನೀಡಿದರು. ಹೊಸ ಮಾರುಕಟ್ಟೆ ಠಾಣೆಯ ಪಿಎಸ್‌ಐ ಬಸವರಾಜ್ ಕನಶೆಟ್ಟಿ ಮತ್ತು ಸಿಬ್ಬಂದಿ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಪೊಲೀಸರ ತ್ವರಿತ ಹಾಗೂ ದಕ್ಷ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

16 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

16 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

16 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

16 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

16 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

16 hours ago