ಶಿರಸಿ:-ಉತ್ತರ ಕನ್ನಡ ಜಿಲ್ಲಾ ಶಿರಸಿ ವೃತ್ತದ ಹೊಸಮಾರುಕಟ್ಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಹಾರೀಸ ತಂದೆ ಅಬ್ದುಲ್ ಜಬ್ಬಾರ ಖಾನ್ ಉದ್ಯೋಗ-ಅಡಿಕೆ ವ್ಯಾಪಾರ. ಸಾ|| ಕೆಳಗಿನ ಗುಡ್ಡದ ಮನೆ ಶಿರಸಿ. ರವರು ಠಾಣೆಗೆ ಹಾಜರಾಗಿ ದುರು ನೀಡಿದ್ದರು “ದಿನಾಂಕ: 24/12/2024 ರಂದು 22-45 ಗಂಟೆಯಿಂದ ದಿನಾಂಕ:25/12/2024 ರಂದು ಬೆಳಿಗ್ಗೆ 07-00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕೆಳಗಿನಗುಡ್ಡದಮನೆ ಸಲಾಮತ ನಗರದಲ್ಲಿರುವ ಪಿರ್ಯಾದಿಯ ಸಲಾಮತ ಅರ್ಕನಟ್ ಟ್ರೇಡರ್ಸ್ ಹೆಸರಿನ ಅಡಿಕೆ ಗೋಡಾನಿನ ಶೆಟ್ಟರ್ಗೆ ಹಾಕಿದ ಬೀಗ ಮುರಿದು, ನಂತರ ಒಳಗಡೆ ಹೋಗಿ ಚಾಲಿ ಅಡಿಕೆ ತುಂಬಿದ 40 ಕೆ.ಜಿ. ಮತ್ತು 70 ಕೆ.ಜಿ. ತೂಕದ ಎರಡು ಅಡಿಕೆ ಚೀಲ್ ಸುಮಾರು 110ಕೆ.ಜಿ. ತೂಕದ್ದು, ಅ॥ಕಿ॥ 48.400/- ರೂಪಾಯಿಯ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಪೋಲಿಸರು ಆರೋಪಿತರಾದ 1) ಖಾಲೀದ ತಂದೆ ಶರೀಪಸಾಬ ಕನವಳ್ಳಿ, ಸಾ॥ ಆರೆಕೊಪ್ಪ ಗ್ರಾಮ ಶಿರಸಿ. ಹಾಲಿ।। ಇಂದಿರಾನಗರ ಶಿರಸಿ. 2) ಇಕ್ವಾಲ್ ಅಬುತಾಹೀರ ಖಾನ. ಸಾ॥ ಮುಭಾರಕ ಮೆಡಿಕಲ್ಸ್ ಹಿಂದೆ ಶಿರಸಿ. ಇವರನ್ನು ಬಂಧಿಸಿ, ಆರೋಪಿತಳು ಕೃತ್ಯಕ್ಕೆ ಬಳಸಿದ ಸ್ಕೂಟಿ ನಂ:ಕೆಎ-31 ಇಡಿ-9733 ಅಂಕಿ 10.000/- ರೂಪಾಯಿ. ಮತ್ತು ಕಳ್ಳತನ ಮಾಡಿದ ಅಡಿಕೆಯಲ್ಲಿ 90 ಕೆ.ಜಿ. ಅಡಿಕೆ ಅ||ಕಿ 39600/- ರೂಪಾಯಿಯ ಅಡಿಕೆಯನ್ನು ಜಪ್ತ ಪಡಿಸಿಕೊಂಡಿದ್ದು, ಆರೋಪಿತರಿಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ.
ಶ್ರೀ ನಾರಾಯಣ, ಎಮ್. ಐ.ಪಿ.ಎಸ್. ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರಕನ್ನಡ ಜಿಲ್ಲೆ, ಶ್ರೀ ಕೃಷ್ಣಮೂರ್ತಿ, ಮಾನ್ಯ ಹೆಚ್ಚುವರಿ ಪೊಲೀಸ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ, ಶ್ರೀ ಗಣೇಶ ಕೆ.ಎಲ್ ಮಾನ್ಯ ಪೊಲೀಸ ಉಪಾಧೀಕ್ಷಕರು, ಶಿರಸಿ ಉಪವಿಭಾಗ, ಶ್ರೀ ಶಶಿಕಾಂತ ವರ್ಮಾ, ಮಾನ್ಯ ಪೊಲೀಸ ವೃತ್ತ ನಿರೀಕ್ಷಕರು, ಶಿರಸಿ ವೃತ್ತ ಶಿರಸಿ ರವರ ಮಾರ್ಗದರ್ಶನದಲ್ಲಿ ಶಿರಸಿ ಹೊಸಮಾರುಕಟ್ಟೆ ಪೊಲೀಸ ಠಾಣೆಯ ಪೊಲೀಸ ಉಪನಿರೀಕ್ಷಕರಾದ ರಾಜಕುಮಾರ ಉಕ್ಕಲಿ ಮತ್ತು ಕುಮಾರಿ ರತ್ನಾ ಕುರಿ ರವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮಾಹಾಂತೇಶ ಬಾರಕೇರ, ಅಶೋಕ ನಾಯ್ಕ, ಸಂದೀಪ ನಿಂಬಾಯಿ, ರಾಮಯ್ಯ, ಹನುಮಂತ, ರಾಕೇಶ, ಮೋಹನ, ಖಾದರ ರವರು ಭಾಗವಹಿಸಿ ಆರೋಪಿತರನ್ನು ಬಂಧಿಸಲು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು . ಈ ಕಾರ್ಯಾಚರಣೆಯ ಬಗ್ಗೆ ಮಾನ್ಯ ಪೊಲೀಸ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ ರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುನಾಥ್ ಎಫ್ ಎಚ್
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…