ಶಿರಸಿ:-ಉತ್ತರ ಕನ್ನಡ ಜಿಲ್ಲಾ ಶಿರಸಿ ವೃತ್ತದ ಹೊಸಮಾರುಕಟ್ಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಹಾರೀಸ ತಂದೆ ಅಬ್ದುಲ್ ಜಬ್ಬಾರ ಖಾನ್ ಉದ್ಯೋಗ-ಅಡಿಕೆ ವ್ಯಾಪಾರ. ಸಾ|| ಕೆಳಗಿನ ಗುಡ್ಡದ ಮನೆ ಶಿರಸಿ. ರವರು ಠಾಣೆಗೆ ಹಾಜರಾಗಿ ದುರು ನೀಡಿದ್ದರು “ದಿನಾಂಕ: 24/12/2024 ರಂದು 22-45 ಗಂಟೆಯಿಂದ ದಿನಾಂಕ:25/12/2024 ರಂದು ಬೆಳಿಗ್ಗೆ 07-00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕೆಳಗಿನಗುಡ್ಡದಮನೆ ಸಲಾಮತ ನಗರದಲ್ಲಿರುವ ಪಿರ್ಯಾದಿಯ ಸಲಾಮತ ಅರ್ಕನಟ್ ಟ್ರೇಡರ್ಸ್ ಹೆಸರಿನ ಅಡಿಕೆ ಗೋಡಾನಿನ ಶೆಟ್ಟರ್ಗೆ ಹಾಕಿದ ಬೀಗ ಮುರಿದು, ನಂತರ ಒಳಗಡೆ ಹೋಗಿ ಚಾಲಿ ಅಡಿಕೆ ತುಂಬಿದ 40 ಕೆ.ಜಿ. ಮತ್ತು 70 ಕೆ.ಜಿ. ತೂಕದ ಎರಡು ಅಡಿಕೆ ಚೀಲ್ ಸುಮಾರು 110ಕೆ.ಜಿ. ತೂಕದ್ದು, ಅ॥ಕಿ॥ 48.400/- ರೂಪಾಯಿಯ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಪೋಲಿಸರು ಆರೋಪಿತರಾದ 1) ಖಾಲೀದ ತಂದೆ ಶರೀಪಸಾಬ ಕನವಳ್ಳಿ, ಸಾ॥ ಆರೆಕೊಪ್ಪ ಗ್ರಾಮ ಶಿರಸಿ. ಹಾಲಿ।। ಇಂದಿರಾನಗರ ಶಿರಸಿ. 2) ಇಕ್ವಾಲ್ ಅಬುತಾಹೀರ ಖಾನ. ಸಾ॥ ಮುಭಾರಕ ಮೆಡಿಕಲ್ಸ್ ಹಿಂದೆ ಶಿರಸಿ. ಇವರನ್ನು ಬಂಧಿಸಿ, ಆರೋಪಿತಳು ಕೃತ್ಯಕ್ಕೆ ಬಳಸಿದ ಸ್ಕೂಟಿ ನಂ:ಕೆಎ-31 ಇಡಿ-9733 ಅಂಕಿ 10.000/- ರೂಪಾಯಿ. ಮತ್ತು ಕಳ್ಳತನ ಮಾಡಿದ ಅಡಿಕೆಯಲ್ಲಿ 90 ಕೆ.ಜಿ. ಅಡಿಕೆ ಅ||ಕಿ 39600/- ರೂಪಾಯಿಯ ಅಡಿಕೆಯನ್ನು ಜಪ್ತ ಪಡಿಸಿಕೊಂಡಿದ್ದು, ಆರೋಪಿತರಿಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ.
ಶ್ರೀ ನಾರಾಯಣ, ಎಮ್. ಐ.ಪಿ.ಎಸ್. ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರಕನ್ನಡ ಜಿಲ್ಲೆ, ಶ್ರೀ ಕೃಷ್ಣಮೂರ್ತಿ, ಮಾನ್ಯ ಹೆಚ್ಚುವರಿ ಪೊಲೀಸ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ, ಶ್ರೀ ಗಣೇಶ ಕೆ.ಎಲ್ ಮಾನ್ಯ ಪೊಲೀಸ ಉಪಾಧೀಕ್ಷಕರು, ಶಿರಸಿ ಉಪವಿಭಾಗ, ಶ್ರೀ ಶಶಿಕಾಂತ ವರ್ಮಾ, ಮಾನ್ಯ ಪೊಲೀಸ ವೃತ್ತ ನಿರೀಕ್ಷಕರು, ಶಿರಸಿ ವೃತ್ತ ಶಿರಸಿ ರವರ ಮಾರ್ಗದರ್ಶನದಲ್ಲಿ ಶಿರಸಿ ಹೊಸಮಾರುಕಟ್ಟೆ ಪೊಲೀಸ ಠಾಣೆಯ ಪೊಲೀಸ ಉಪನಿರೀಕ್ಷಕರಾದ ರಾಜಕುಮಾರ ಉಕ್ಕಲಿ ಮತ್ತು ಕುಮಾರಿ ರತ್ನಾ ಕುರಿ ರವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮಾಹಾಂತೇಶ ಬಾರಕೇರ, ಅಶೋಕ ನಾಯ್ಕ, ಸಂದೀಪ ನಿಂಬಾಯಿ, ರಾಮಯ್ಯ, ಹನುಮಂತ, ರಾಕೇಶ, ಮೋಹನ, ಖಾದರ ರವರು ಭಾಗವಹಿಸಿ ಆರೋಪಿತರನ್ನು ಬಂಧಿಸಲು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು . ಈ ಕಾರ್ಯಾಚರಣೆಯ ಬಗ್ಗೆ ಮಾನ್ಯ ಪೊಲೀಸ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ ರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುನಾಥ್ ಎಫ್ ಎಚ್
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…