Crime

ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರಿಂದ ಅಡಿಕೆ ಅಂಗಡಿ ಕಳ್ಳತನ ಮಾಡುತಿದ್ದ ಆರೋಪಿಗಳ ಬಂಧನ

ಶಿರಸಿ:-ಉತ್ತರ ಕನ್ನಡ ಜಿಲ್ಲಾ ಶಿರಸಿ ವೃತ್ತದ ಹೊಸಮಾರುಕಟ್ಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಹಾರೀಸ ತಂದೆ ಅಬ್ದುಲ್ ಜಬ್ಬಾರ ಖಾನ್ ಉದ್ಯೋಗ-ಅಡಿಕೆ ವ್ಯಾಪಾರ. ಸಾ|| ಕೆಳಗಿನ ಗುಡ್ಡದ ಮನೆ ಶಿರಸಿ. ರವರು ಠಾಣೆಗೆ ಹಾಜರಾಗಿ ದುರು ನೀಡಿದ್ದರು “ದಿನಾಂಕ: 24/12/2024 ರಂದು 22-45 ಗಂಟೆಯಿಂದ ದಿನಾಂಕ:25/12/2024 ರಂದು ಬೆಳಿಗ್ಗೆ 07-00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕೆಳಗಿನಗುಡ್ಡದಮನೆ ಸಲಾಮತ ನಗರದಲ್ಲಿರುವ ಪಿರ್ಯಾದಿಯ ಸಲಾಮತ ಅರ್ಕನಟ್ ಟ್ರೇಡರ್ಸ್ ಹೆಸರಿನ ಅಡಿಕೆ ಗೋಡಾನಿನ ಶೆಟ್ಟರ್‌ಗೆ ಹಾಕಿದ ಬೀಗ ಮುರಿದು, ನಂತರ ಒಳಗಡೆ ಹೋಗಿ ಚಾಲಿ ಅಡಿಕೆ ತುಂಬಿದ 40 ಕೆ.ಜಿ. ಮತ್ತು 70 ಕೆ.ಜಿ. ತೂಕದ ಎರಡು ಅಡಿಕೆ ಚೀಲ್ ಸುಮಾರು 110ಕೆ.ಜಿ. ತೂಕದ್ದು, ಅ॥ಕಿ॥ 48.400/- ರೂಪಾಯಿಯ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಪೋಲಿಸರು ಆರೋಪಿತರಾದ 1) ಖಾಲೀದ ತಂದೆ ಶರೀಪಸಾಬ ಕನವಳ್ಳಿ, ಸಾ॥ ಆರೆಕೊಪ್ಪ ಗ್ರಾಮ ಶಿರಸಿ. ಹಾಲಿ।। ಇಂದಿರಾನಗರ ಶಿರಸಿ. 2) ಇಕ್ವಾಲ್ ಅಬುತಾಹೀರ ಖಾನ. ಸಾ॥ ಮುಭಾರಕ ಮೆಡಿಕಲ್ಸ್ ಹಿಂದೆ ಶಿರಸಿ. ಇವರನ್ನು ಬಂಧಿಸಿ, ಆರೋಪಿತಳು ಕೃತ್ಯಕ್ಕೆ ಬಳಸಿದ ಸ್ಕೂಟಿ ನಂ:ಕೆಎ-31 ಇಡಿ-9733 ಅಂಕಿ 10.000/- ರೂಪಾಯಿ. ಮತ್ತು ಕಳ್ಳತನ ಮಾಡಿದ ಅಡಿಕೆಯಲ್ಲಿ 90 ಕೆ.ಜಿ. ಅಡಿಕೆ ಅ||ಕಿ 39600/- ರೂಪಾಯಿಯ ಅಡಿಕೆಯನ್ನು ಜಪ್ತ ಪಡಿಸಿಕೊಂಡಿದ್ದು, ಆರೋಪಿತರಿಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ.
ಶ್ರೀ ನಾರಾಯಣ, ಎಮ್. ಐ.ಪಿ.ಎಸ್. ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರಕನ್ನಡ ಜಿಲ್ಲೆ, ಶ್ರೀ ಕೃಷ್ಣಮೂರ್ತಿ, ಮಾನ್ಯ ಹೆಚ್ಚುವರಿ ಪೊಲೀಸ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ, ಶ್ರೀ ಗಣೇಶ ಕೆ.ಎಲ್ ಮಾನ್ಯ ಪೊಲೀಸ ಉಪಾಧೀಕ್ಷಕರು, ಶಿರಸಿ ಉಪವಿಭಾಗ, ಶ್ರೀ ಶಶಿಕಾಂತ ವರ್ಮಾ, ಮಾನ್ಯ ಪೊಲೀಸ ವೃತ್ತ ನಿರೀಕ್ಷಕರು, ಶಿರಸಿ ವೃತ್ತ ಶಿರಸಿ ರವರ ಮಾರ್ಗದರ್ಶನದಲ್ಲಿ ಶಿರಸಿ ಹೊಸಮಾರುಕಟ್ಟೆ ಪೊಲೀಸ ಠಾಣೆಯ ಪೊಲೀಸ ಉಪನಿರೀಕ್ಷಕರಾದ ರಾಜಕುಮಾರ ಉಕ್ಕಲಿ ಮತ್ತು ಕುಮಾರಿ ರತ್ನಾ ಕುರಿ ರವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮಾಹಾಂತೇಶ ಬಾರಕೇರ, ಅಶೋಕ ನಾಯ್ಕ, ಸಂದೀಪ ನಿಂಬಾಯಿ, ರಾಮಯ್ಯ, ಹನುಮಂತ, ರಾಕೇಶ, ಮೋಹನ, ಖಾದರ ರವರು ಭಾಗವಹಿಸಿ ಆರೋಪಿತರನ್ನು ಬಂಧಿಸಲು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು . ಈ ಕಾರ್ಯಾಚರಣೆಯ ಬಗ್ಗೆ ಮಾನ್ಯ ಪೊಲೀಸ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ ರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವರದಿ: ಮಂಜುನಾಥ್ ಎಫ್ ಎಚ್

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

9 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

9 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

9 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

9 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

9 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago