Crime

ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರಿಂದ ಅಡಿಕೆ ಅಂಗಡಿ ಕಳ್ಳತನ ಮಾಡುತಿದ್ದ ಆರೋಪಿಗಳ ಬಂಧನ

ಶಿರಸಿ:-ಉತ್ತರ ಕನ್ನಡ ಜಿಲ್ಲಾ ಶಿರಸಿ ವೃತ್ತದ ಹೊಸಮಾರುಕಟ್ಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಹಾರೀಸ ತಂದೆ ಅಬ್ದುಲ್ ಜಬ್ಬಾರ ಖಾನ್ ಉದ್ಯೋಗ-ಅಡಿಕೆ ವ್ಯಾಪಾರ. ಸಾ|| ಕೆಳಗಿನ ಗುಡ್ಡದ ಮನೆ ಶಿರಸಿ. ರವರು ಠಾಣೆಗೆ ಹಾಜರಾಗಿ ದುರು ನೀಡಿದ್ದರು “ದಿನಾಂಕ: 24/12/2024 ರಂದು 22-45 ಗಂಟೆಯಿಂದ ದಿನಾಂಕ:25/12/2024 ರಂದು ಬೆಳಿಗ್ಗೆ 07-00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕೆಳಗಿನಗುಡ್ಡದಮನೆ ಸಲಾಮತ ನಗರದಲ್ಲಿರುವ ಪಿರ್ಯಾದಿಯ ಸಲಾಮತ ಅರ್ಕನಟ್ ಟ್ರೇಡರ್ಸ್ ಹೆಸರಿನ ಅಡಿಕೆ ಗೋಡಾನಿನ ಶೆಟ್ಟರ್‌ಗೆ ಹಾಕಿದ ಬೀಗ ಮುರಿದು, ನಂತರ ಒಳಗಡೆ ಹೋಗಿ ಚಾಲಿ ಅಡಿಕೆ ತುಂಬಿದ 40 ಕೆ.ಜಿ. ಮತ್ತು 70 ಕೆ.ಜಿ. ತೂಕದ ಎರಡು ಅಡಿಕೆ ಚೀಲ್ ಸುಮಾರು 110ಕೆ.ಜಿ. ತೂಕದ್ದು, ಅ॥ಕಿ॥ 48.400/- ರೂಪಾಯಿಯ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಪೋಲಿಸರು ಆರೋಪಿತರಾದ 1) ಖಾಲೀದ ತಂದೆ ಶರೀಪಸಾಬ ಕನವಳ್ಳಿ, ಸಾ॥ ಆರೆಕೊಪ್ಪ ಗ್ರಾಮ ಶಿರಸಿ. ಹಾಲಿ।। ಇಂದಿರಾನಗರ ಶಿರಸಿ. 2) ಇಕ್ವಾಲ್ ಅಬುತಾಹೀರ ಖಾನ. ಸಾ॥ ಮುಭಾರಕ ಮೆಡಿಕಲ್ಸ್ ಹಿಂದೆ ಶಿರಸಿ. ಇವರನ್ನು ಬಂಧಿಸಿ, ಆರೋಪಿತಳು ಕೃತ್ಯಕ್ಕೆ ಬಳಸಿದ ಸ್ಕೂಟಿ ನಂ:ಕೆಎ-31 ಇಡಿ-9733 ಅಂಕಿ 10.000/- ರೂಪಾಯಿ. ಮತ್ತು ಕಳ್ಳತನ ಮಾಡಿದ ಅಡಿಕೆಯಲ್ಲಿ 90 ಕೆ.ಜಿ. ಅಡಿಕೆ ಅ||ಕಿ 39600/- ರೂಪಾಯಿಯ ಅಡಿಕೆಯನ್ನು ಜಪ್ತ ಪಡಿಸಿಕೊಂಡಿದ್ದು, ಆರೋಪಿತರಿಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ.
ಶ್ರೀ ನಾರಾಯಣ, ಎಮ್. ಐ.ಪಿ.ಎಸ್. ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರಕನ್ನಡ ಜಿಲ್ಲೆ, ಶ್ರೀ ಕೃಷ್ಣಮೂರ್ತಿ, ಮಾನ್ಯ ಹೆಚ್ಚುವರಿ ಪೊಲೀಸ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ, ಶ್ರೀ ಗಣೇಶ ಕೆ.ಎಲ್ ಮಾನ್ಯ ಪೊಲೀಸ ಉಪಾಧೀಕ್ಷಕರು, ಶಿರಸಿ ಉಪವಿಭಾಗ, ಶ್ರೀ ಶಶಿಕಾಂತ ವರ್ಮಾ, ಮಾನ್ಯ ಪೊಲೀಸ ವೃತ್ತ ನಿರೀಕ್ಷಕರು, ಶಿರಸಿ ವೃತ್ತ ಶಿರಸಿ ರವರ ಮಾರ್ಗದರ್ಶನದಲ್ಲಿ ಶಿರಸಿ ಹೊಸಮಾರುಕಟ್ಟೆ ಪೊಲೀಸ ಠಾಣೆಯ ಪೊಲೀಸ ಉಪನಿರೀಕ್ಷಕರಾದ ರಾಜಕುಮಾರ ಉಕ್ಕಲಿ ಮತ್ತು ಕುಮಾರಿ ರತ್ನಾ ಕುರಿ ರವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮಾಹಾಂತೇಶ ಬಾರಕೇರ, ಅಶೋಕ ನಾಯ್ಕ, ಸಂದೀಪ ನಿಂಬಾಯಿ, ರಾಮಯ್ಯ, ಹನುಮಂತ, ರಾಕೇಶ, ಮೋಹನ, ಖಾದರ ರವರು ಭಾಗವಹಿಸಿ ಆರೋಪಿತರನ್ನು ಬಂಧಿಸಲು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು . ಈ ಕಾರ್ಯಾಚರಣೆಯ ಬಗ್ಗೆ ಮಾನ್ಯ ಪೊಲೀಸ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ ರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವರದಿ: ಮಂಜುನಾಥ್ ಎಫ್ ಎಚ್

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

5 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

12 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

12 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago