Crime

ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರಿಂದ ಅಡಿಕೆ ಅಂಗಡಿ ಕಳ್ಳತನ ಮಾಡುತಿದ್ದ ಆರೋಪಿಗಳ ಬಂಧನ

ಶಿರಸಿ:-ಉತ್ತರ ಕನ್ನಡ ಜಿಲ್ಲಾ ಶಿರಸಿ ವೃತ್ತದ ಹೊಸಮಾರುಕಟ್ಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಹಾರೀಸ ತಂದೆ ಅಬ್ದುಲ್ ಜಬ್ಬಾರ ಖಾನ್ ಉದ್ಯೋಗ-ಅಡಿಕೆ ವ್ಯಾಪಾರ. ಸಾ|| ಕೆಳಗಿನ ಗುಡ್ಡದ ಮನೆ ಶಿರಸಿ. ರವರು ಠಾಣೆಗೆ ಹಾಜರಾಗಿ ದುರು ನೀಡಿದ್ದರು “ದಿನಾಂಕ: 24/12/2024 ರಂದು 22-45 ಗಂಟೆಯಿಂದ ದಿನಾಂಕ:25/12/2024 ರಂದು ಬೆಳಿಗ್ಗೆ 07-00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕೆಳಗಿನಗುಡ್ಡದಮನೆ ಸಲಾಮತ ನಗರದಲ್ಲಿರುವ ಪಿರ್ಯಾದಿಯ ಸಲಾಮತ ಅರ್ಕನಟ್ ಟ್ರೇಡರ್ಸ್ ಹೆಸರಿನ ಅಡಿಕೆ ಗೋಡಾನಿನ ಶೆಟ್ಟರ್‌ಗೆ ಹಾಕಿದ ಬೀಗ ಮುರಿದು, ನಂತರ ಒಳಗಡೆ ಹೋಗಿ ಚಾಲಿ ಅಡಿಕೆ ತುಂಬಿದ 40 ಕೆ.ಜಿ. ಮತ್ತು 70 ಕೆ.ಜಿ. ತೂಕದ ಎರಡು ಅಡಿಕೆ ಚೀಲ್ ಸುಮಾರು 110ಕೆ.ಜಿ. ತೂಕದ್ದು, ಅ॥ಕಿ॥ 48.400/- ರೂಪಾಯಿಯ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಪೋಲಿಸರು ಆರೋಪಿತರಾದ 1) ಖಾಲೀದ ತಂದೆ ಶರೀಪಸಾಬ ಕನವಳ್ಳಿ, ಸಾ॥ ಆರೆಕೊಪ್ಪ ಗ್ರಾಮ ಶಿರಸಿ. ಹಾಲಿ।। ಇಂದಿರಾನಗರ ಶಿರಸಿ. 2) ಇಕ್ವಾಲ್ ಅಬುತಾಹೀರ ಖಾನ. ಸಾ॥ ಮುಭಾರಕ ಮೆಡಿಕಲ್ಸ್ ಹಿಂದೆ ಶಿರಸಿ. ಇವರನ್ನು ಬಂಧಿಸಿ, ಆರೋಪಿತಳು ಕೃತ್ಯಕ್ಕೆ ಬಳಸಿದ ಸ್ಕೂಟಿ ನಂ:ಕೆಎ-31 ಇಡಿ-9733 ಅಂಕಿ 10.000/- ರೂಪಾಯಿ. ಮತ್ತು ಕಳ್ಳತನ ಮಾಡಿದ ಅಡಿಕೆಯಲ್ಲಿ 90 ಕೆ.ಜಿ. ಅಡಿಕೆ ಅ||ಕಿ 39600/- ರೂಪಾಯಿಯ ಅಡಿಕೆಯನ್ನು ಜಪ್ತ ಪಡಿಸಿಕೊಂಡಿದ್ದು, ಆರೋಪಿತರಿಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ.
ಶ್ರೀ ನಾರಾಯಣ, ಎಮ್. ಐ.ಪಿ.ಎಸ್. ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರಕನ್ನಡ ಜಿಲ್ಲೆ, ಶ್ರೀ ಕೃಷ್ಣಮೂರ್ತಿ, ಮಾನ್ಯ ಹೆಚ್ಚುವರಿ ಪೊಲೀಸ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ, ಶ್ರೀ ಗಣೇಶ ಕೆ.ಎಲ್ ಮಾನ್ಯ ಪೊಲೀಸ ಉಪಾಧೀಕ್ಷಕರು, ಶಿರಸಿ ಉಪವಿಭಾಗ, ಶ್ರೀ ಶಶಿಕಾಂತ ವರ್ಮಾ, ಮಾನ್ಯ ಪೊಲೀಸ ವೃತ್ತ ನಿರೀಕ್ಷಕರು, ಶಿರಸಿ ವೃತ್ತ ಶಿರಸಿ ರವರ ಮಾರ್ಗದರ್ಶನದಲ್ಲಿ ಶಿರಸಿ ಹೊಸಮಾರುಕಟ್ಟೆ ಪೊಲೀಸ ಠಾಣೆಯ ಪೊಲೀಸ ಉಪನಿರೀಕ್ಷಕರಾದ ರಾಜಕುಮಾರ ಉಕ್ಕಲಿ ಮತ್ತು ಕುಮಾರಿ ರತ್ನಾ ಕುರಿ ರವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮಾಹಾಂತೇಶ ಬಾರಕೇರ, ಅಶೋಕ ನಾಯ್ಕ, ಸಂದೀಪ ನಿಂಬಾಯಿ, ರಾಮಯ್ಯ, ಹನುಮಂತ, ರಾಕೇಶ, ಮೋಹನ, ಖಾದರ ರವರು ಭಾಗವಹಿಸಿ ಆರೋಪಿತರನ್ನು ಬಂಧಿಸಲು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು . ಈ ಕಾರ್ಯಾಚರಣೆಯ ಬಗ್ಗೆ ಮಾನ್ಯ ಪೊಲೀಸ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ ರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವರದಿ: ಮಂಜುನಾಥ್ ಎಫ್ ಎಚ್

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

14 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

19 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

19 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

19 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

19 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

24 hours ago