Crime

ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರಿಂದ ಅಡಿಕೆ ಅಂಗಡಿ ಕಳ್ಳತನ ಮಾಡುತಿದ್ದ ಆರೋಪಿಗಳ ಬಂಧನ

ಶಿರಸಿ:-ಉತ್ತರ ಕನ್ನಡ ಜಿಲ್ಲಾ ಶಿರಸಿ ವೃತ್ತದ ಹೊಸಮಾರುಕಟ್ಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಹಾರೀಸ ತಂದೆ ಅಬ್ದುಲ್ ಜಬ್ಬಾರ ಖಾನ್ ಉದ್ಯೋಗ-ಅಡಿಕೆ ವ್ಯಾಪಾರ. ಸಾ|| ಕೆಳಗಿನ ಗುಡ್ಡದ ಮನೆ ಶಿರಸಿ. ರವರು ಠಾಣೆಗೆ ಹಾಜರಾಗಿ ದುರು ನೀಡಿದ್ದರು “ದಿನಾಂಕ: 24/12/2024 ರಂದು 22-45 ಗಂಟೆಯಿಂದ ದಿನಾಂಕ:25/12/2024 ರಂದು ಬೆಳಿಗ್ಗೆ 07-00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕೆಳಗಿನಗುಡ್ಡದಮನೆ ಸಲಾಮತ ನಗರದಲ್ಲಿರುವ ಪಿರ್ಯಾದಿಯ ಸಲಾಮತ ಅರ್ಕನಟ್ ಟ್ರೇಡರ್ಸ್ ಹೆಸರಿನ ಅಡಿಕೆ ಗೋಡಾನಿನ ಶೆಟ್ಟರ್‌ಗೆ ಹಾಕಿದ ಬೀಗ ಮುರಿದು, ನಂತರ ಒಳಗಡೆ ಹೋಗಿ ಚಾಲಿ ಅಡಿಕೆ ತುಂಬಿದ 40 ಕೆ.ಜಿ. ಮತ್ತು 70 ಕೆ.ಜಿ. ತೂಕದ ಎರಡು ಅಡಿಕೆ ಚೀಲ್ ಸುಮಾರು 110ಕೆ.ಜಿ. ತೂಕದ್ದು, ಅ॥ಕಿ॥ 48.400/- ರೂಪಾಯಿಯ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಪೋಲಿಸರು ಆರೋಪಿತರಾದ 1) ಖಾಲೀದ ತಂದೆ ಶರೀಪಸಾಬ ಕನವಳ್ಳಿ, ಸಾ॥ ಆರೆಕೊಪ್ಪ ಗ್ರಾಮ ಶಿರಸಿ. ಹಾಲಿ।। ಇಂದಿರಾನಗರ ಶಿರಸಿ. 2) ಇಕ್ವಾಲ್ ಅಬುತಾಹೀರ ಖಾನ. ಸಾ॥ ಮುಭಾರಕ ಮೆಡಿಕಲ್ಸ್ ಹಿಂದೆ ಶಿರಸಿ. ಇವರನ್ನು ಬಂಧಿಸಿ, ಆರೋಪಿತಳು ಕೃತ್ಯಕ್ಕೆ ಬಳಸಿದ ಸ್ಕೂಟಿ ನಂ:ಕೆಎ-31 ಇಡಿ-9733 ಅಂಕಿ 10.000/- ರೂಪಾಯಿ. ಮತ್ತು ಕಳ್ಳತನ ಮಾಡಿದ ಅಡಿಕೆಯಲ್ಲಿ 90 ಕೆ.ಜಿ. ಅಡಿಕೆ ಅ||ಕಿ 39600/- ರೂಪಾಯಿಯ ಅಡಿಕೆಯನ್ನು ಜಪ್ತ ಪಡಿಸಿಕೊಂಡಿದ್ದು, ಆರೋಪಿತರಿಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ.
ಶ್ರೀ ನಾರಾಯಣ, ಎಮ್. ಐ.ಪಿ.ಎಸ್. ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರಕನ್ನಡ ಜಿಲ್ಲೆ, ಶ್ರೀ ಕೃಷ್ಣಮೂರ್ತಿ, ಮಾನ್ಯ ಹೆಚ್ಚುವರಿ ಪೊಲೀಸ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ, ಶ್ರೀ ಗಣೇಶ ಕೆ.ಎಲ್ ಮಾನ್ಯ ಪೊಲೀಸ ಉಪಾಧೀಕ್ಷಕರು, ಶಿರಸಿ ಉಪವಿಭಾಗ, ಶ್ರೀ ಶಶಿಕಾಂತ ವರ್ಮಾ, ಮಾನ್ಯ ಪೊಲೀಸ ವೃತ್ತ ನಿರೀಕ್ಷಕರು, ಶಿರಸಿ ವೃತ್ತ ಶಿರಸಿ ರವರ ಮಾರ್ಗದರ್ಶನದಲ್ಲಿ ಶಿರಸಿ ಹೊಸಮಾರುಕಟ್ಟೆ ಪೊಲೀಸ ಠಾಣೆಯ ಪೊಲೀಸ ಉಪನಿರೀಕ್ಷಕರಾದ ರಾಜಕುಮಾರ ಉಕ್ಕಲಿ ಮತ್ತು ಕುಮಾರಿ ರತ್ನಾ ಕುರಿ ರವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮಾಹಾಂತೇಶ ಬಾರಕೇರ, ಅಶೋಕ ನಾಯ್ಕ, ಸಂದೀಪ ನಿಂಬಾಯಿ, ರಾಮಯ್ಯ, ಹನುಮಂತ, ರಾಕೇಶ, ಮೋಹನ, ಖಾದರ ರವರು ಭಾಗವಹಿಸಿ ಆರೋಪಿತರನ್ನು ಬಂಧಿಸಲು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು . ಈ ಕಾರ್ಯಾಚರಣೆಯ ಬಗ್ಗೆ ಮಾನ್ಯ ಪೊಲೀಸ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ ರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವರದಿ: ಮಂಜುನಾಥ್ ಎಫ್ ಎಚ್

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

3 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

3 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

3 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

3 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

18 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

18 hours ago