ಯುವತಿಯೊಬ್ಬಳು ತನ್ನ ಪ್ರಿಯತಮನೊಂದಿಗೆ ಸರಸವಾಡುತ್ತಿದ್ದದ್ದನ್ನು ಅಪ್ರಾಪ್ತ ವಯಸ್ಸಿನ ತಮ್ಮ ನೋಡಿದನೆಂದು ಬರ್ಬರವಾಗಿ ಕೊಲೆ ಮಾಡಿರುವ ಭಯಾನಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಾಯ್ಬರೇಲಿ ಜಿಲ್ಲೆಯ ಭಡೋಖರ್ ಬಳಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತಂದೆ ತಾಯಿಯು 18 ವರ್ಷದ ಮಗಳೊಂದಿಗೆ 12 ವರ್ಷದ ಮಗನನ್ನು ಬಿಟ್ಟು ಬೇರೆ ಊರಿಗೆ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು. ಆಗ ಯುವತಿ ತನ್ನ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಸರಸವಾಡುವುದಕ್ಕೆ ಆರಂಭಿಸಿದ್ದಾಳೆ. ಇದನ್ನು ಕಂಡ ಆಕೆಯ ತಮ್ಮ ಈ ವಿಚಾರವನ್ನು ಅಪ್ಪ ಅಮ್ಮನಿಗೆ ಹೇಳುವುದಾಗಿ ಹೇಳಿದ್ದಾನೆ. ಆ ಹಿನ್ನೆಲೆ ಯುವತಿ ಪ್ರಿಯಕರನೊಂದಿಗೆ ಸೇರಿಕೊಂಡು ಮನೆಯಲ್ಲಿದ್ದ ಕುಡಗೋಲಿನಿಂದ ತಮ್ಮನ ಕುತ್ತಿಗೆಯನ್ನು ಕತ್ತರಿಸಿದ್ದಾಳೆ. ಬಾಲಕ ಕೊಲೆಯಾಗಿರುವ ವಿಚಾರವನ್ನು ಸ್ಥಳೀಯರು ಪೊಲೀಸರಿಗೆ ತಲುಪಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವಿಚಾರಿಸಿದಾಗ ಯುವತಿ, ಅದೇ ಊರಿನ ಯುವಕನೊಬ್ಬ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ್ದಾಗಿ, ದರೋಡೆಗೆ ಏನೂ ಸಿಗದ ಕಾರಣ ತಮ್ಮನನ್ನು ಕೊಂದಿದ್ದಾಗಿ ಹೇಳಿದ್ದಾಳೆ. ಯುವತಿ ಹೇಳಿದ ಯುವಕನನ್ನು ಕರೆಸಿ ವಿಚಾರಣೆ ನಡೆಸಿದಾಗ ಆತ ಘಟನೆ ನಡೆದ ಸಮಯದಲ್ಲಿ ಲಕ್ನೋದಲ್ಲಿ ಇದ್ದದ್ದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…