ಅಳ್ನಾವರ: ಸೇನಾ ಭರ್ತಿಗೆಂದು ಆಸ್ಸಾಂಗೆ ತೆರಳಿದ್ದ ಅಭ್ಯರ್ಥಿ ದರ್ಶನ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಅಳ್ನಾವರ ತಾಲೂಕಿನ ಅರ್ಲವಾಡ ಗ್ರಾಮದ ದರ್ಶನ ಬೀಡಕರ್ ಹೃದಯಾಘಾತದಿಂದ ಮೃತಪಟ್ಟ ಯುವಕ ಆಸ್ಸಾಂನ್ನಲ್ಲಿ ಸೇನಾ ಬರ್ತಿ ಪ್ರಾರಂಭವಾಗಿದ್ದ ಬೆನ್ನೆಲೆ ಸೇನೆಗೆ ಸೇರುವ ಉದ್ದೇಶದಿಂದ ದರ್ಶನ್ ಎಂಬ ಈ ಯುವಕ ಸೇನಾ ಬರ್ತಿಗೆಂದು ಆಸ್ಸಾಂಗೆ ತೆರಳಿದ್ದಾನೆ. ದೈಹಿಕ ಪರೀಕ್ಷೆಯ ವೇಳೆ ಅಂದರೆ ರನ್ನಿಂಗ್ ನಲ್ಲಿ ಓಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಏನಾಗಿದೆ ಎಂದು ನೋಡುವಷ್ಟರಲ್ಲಿ ಹೃದಯಾಘಾತದಿಂದ ದರ್ಶನ್ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ದರ್ಶನ್ ಪಾರ್ಥಿವ ಶರೀರವನ್ನು ನಿನ್ನೆ ತಡ ರಾತ್ರಿ ಸ್ವಗ್ರಾಮವಾದ ಅರ್ಲವಾಡಕ್ಕೆ ತರಲಾಗಿದೆ. ಮಾರ್ಗ ಮಧ್ಯೆ ಗ್ರಾಮಸ್ಥರಿಂದ ಭಾರತ್ ಮಾತಾ ಕೀ ಜೈ ದರ್ಶನ್ ಅಮರ್ ರಹೇ ಎಂಬ ಭಾವನಾತ್ಮಕ ಘೋಷಣೆಗಳು ಮೊಳಗಿದವು. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ವರದಿ: ಚರಂತಯ್ಯ ಹಿರೇಮಠ
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದ ಅರ್ಚಕನೊಬ್ಬ ತನ್ನ ಇಬ್ಬರು…
ಬೆಂಗಳೂರು ನಗರದಲ್ಲಿ ಮಹಿಳೆಯರ ಖಾಸಗಿ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಆರ್ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರೇಗೌಡ…
ನಗರಗೆರೆ ಹೋಬಳಿಯ ವಾಟದಹೊಸಹಳ್ಳಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ನಿವಾಸಿ ರಾಮಚಂದ್ರಪ್ಪ (57) ಅವರು ಕಳೆದ ಮೂರು ದಿನಗಳಿಂದ…
ಜಾಗತಿಕ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಸಂಸ್ಥೆಯಾದ JPMorgan Chase ನಲ್ಲಿ ಗಂಭೀರ ವಿವಾದವೊಂದು ಸ್ಫೋಟಗೊಂಡಿದೆ. ಸಂಸ್ಥೆಯ ಲಿವರೇಜ್ಡ್ ಫೈನಾನ್ಸ್ ವಿಭಾಗದ…
ಲಿಂಗಸಗೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಳ್ಳಭಟ್ಟಿ ಸರಾಯಿ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿದ್ದು,…
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…