ಅಳ್ನಾವರ: ಸೇನಾ ಭರ್ತಿಗೆಂದು ಆಸ್ಸಾಂಗೆ ತೆರಳಿದ್ದ ಅಭ್ಯರ್ಥಿ ದರ್ಶನ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಅಳ್ನಾವರ ತಾಲೂಕಿನ ಅರ್ಲವಾಡ ಗ್ರಾಮದ ದರ್ಶನ ಬೀಡಕರ್ ಹೃದಯಾಘಾತದಿಂದ ಮೃತಪಟ್ಟ ಯುವಕ ಆಸ್ಸಾಂನ್ನಲ್ಲಿ ಸೇನಾ ಬರ್ತಿ ಪ್ರಾರಂಭವಾಗಿದ್ದ ಬೆನ್ನೆಲೆ ಸೇನೆಗೆ ಸೇರುವ ಉದ್ದೇಶದಿಂದ ದರ್ಶನ್ ಎಂಬ ಈ ಯುವಕ ಸೇನಾ ಬರ್ತಿಗೆಂದು ಆಸ್ಸಾಂಗೆ ತೆರಳಿದ್ದಾನೆ. ದೈಹಿಕ ಪರೀಕ್ಷೆಯ ವೇಳೆ ಅಂದರೆ ರನ್ನಿಂಗ್ ನಲ್ಲಿ ಓಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಏನಾಗಿದೆ ಎಂದು ನೋಡುವಷ್ಟರಲ್ಲಿ ಹೃದಯಾಘಾತದಿಂದ ದರ್ಶನ್ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ದರ್ಶನ್ ಪಾರ್ಥಿವ ಶರೀರವನ್ನು ನಿನ್ನೆ ತಡ ರಾತ್ರಿ ಸ್ವಗ್ರಾಮವಾದ ಅರ್ಲವಾಡಕ್ಕೆ ತರಲಾಗಿದೆ. ಮಾರ್ಗ ಮಧ್ಯೆ ಗ್ರಾಮಸ್ಥರಿಂದ ಭಾರತ್ ಮಾತಾ ಕೀ ಜೈ ದರ್ಶನ್ ಅಮರ್ ರಹೇ ಎಂಬ ಭಾವನಾತ್ಮಕ ಘೋಷಣೆಗಳು ಮೊಳಗಿದವು. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ವರದಿ: ಚರಂತಯ್ಯ ಹಿರೇಮಠ
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…