ಕುಮಟಾ ತಾಲೂಕಿನ ಗುಡೇಅಂಗಡಿಯ ನಿವಾಸಿ ಸುಮಾ ಮಡಿವಾಳ (32) ಅವರು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕುಮಟಾ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಗ್ಗೆ 9.20ರ ವೇಳೆಗೆ, ಅವರು ಸೈಕಲ್ ರಿಪೇರಿ ಮಾಡುವ ಪ್ರಶಾಂತ ಮಡಿವಾಳ ಅವರೊಂದಿಗೆ ಬೈಕ್ನಲ್ಲಿ ಹೊಲನಗದ್ದೆಯಿಂದ ಕುಮಟಾ ಕಡೆ ಪ್ರಯಾಣಿಸುತ್ತಿದ್ದರು. ನಾಗಶ್ರೀ ವಾಟರ್ ಸರ್ವೀಸ್ ಸೆಂಟರ್ ಬಳಿ ತಲುಪಿದಾಗ, ಅಚಾನಕ್ ನಾಯಿ ರಸ್ತೆ ಮಧ್ಯೆ ಓಡಿದ ಕಾರಣ, ಪ್ರಶಾಂತ ಮಡಿವಾಳ ತಕ್ಷಣವೇ ಬೈಕ್ ನಿಲ್ಲಿಸಲು ಪ್ರಯತ್ನಿಸಿದರು.
ಈ ಅವಘಡದಲ್ಲಿ, ಬೈಕ್ನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಸುಮಾ ಮಡಿವಾಳ ಆಯತಪ್ಪಿ ನೆಲಕ್ಕೆ ಬಿದ್ದರು. ಬಿದ್ದ ತಕ್ಷಣವೇ ಅವರ ಮೂಗಿನಿಂದ ರಕ್ತ ಹರಿಯಲು ಶುರುವಾದುದು, ತಲೆ ಹಾಗೂ ಹಣೆಗೂ ಗಂಭೀರ ಗಾಯಗಳಾಗಿದ್ದು, ಪರಿಸ್ಥಿತಿ ತೀವ್ರಗೊಂಡಿತು. ತಕ್ಷಣವೇ ಆಂಬುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತು, ಆದರೆ ಮೂರಾಕಟ್ಟಾ ಬಳಿ ಅವರು ಕೊನೆಯುಸಿರೆಳೆದರು.
ಸ್ಥಳೀಯ ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುವ 72 ವರ್ಷದ ಮಹಾದೇವ ಮಡಿವಾಳ ಈ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರ ಮಾಹಿತಿ ಆಧಾರದ ಮೇಲೆ, ಬೈಕ್ ಸವಾರ ಪ್ರಶಾಂತ ಮಡಿವಾಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಘಟನೆಯ ಸಂಬಂಧ ಪಿಎಸ್ಐ ರವಿ ಗುಡ್ಡಿ ತನಿಖೆ ಮುಂದುವರಿಸುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…