ಕುಮಟಾ ತಾಲೂಕಿನ ಗುಡೇಅಂಗಡಿಯ ನಿವಾಸಿ ಸುಮಾ ಮಡಿವಾಳ (32) ಅವರು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕುಮಟಾ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಗ್ಗೆ 9.20ರ ವೇಳೆಗೆ, ಅವರು ಸೈಕಲ್ ರಿಪೇರಿ ಮಾಡುವ ಪ್ರಶಾಂತ ಮಡಿವಾಳ ಅವರೊಂದಿಗೆ ಬೈಕ್ನಲ್ಲಿ ಹೊಲನಗದ್ದೆಯಿಂದ ಕುಮಟಾ ಕಡೆ ಪ್ರಯಾಣಿಸುತ್ತಿದ್ದರು. ನಾಗಶ್ರೀ ವಾಟರ್ ಸರ್ವೀಸ್ ಸೆಂಟರ್ ಬಳಿ ತಲುಪಿದಾಗ, ಅಚಾನಕ್ ನಾಯಿ ರಸ್ತೆ ಮಧ್ಯೆ ಓಡಿದ ಕಾರಣ, ಪ್ರಶಾಂತ ಮಡಿವಾಳ ತಕ್ಷಣವೇ ಬೈಕ್ ನಿಲ್ಲಿಸಲು ಪ್ರಯತ್ನಿಸಿದರು.
ಈ ಅವಘಡದಲ್ಲಿ, ಬೈಕ್ನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಸುಮಾ ಮಡಿವಾಳ ಆಯತಪ್ಪಿ ನೆಲಕ್ಕೆ ಬಿದ್ದರು. ಬಿದ್ದ ತಕ್ಷಣವೇ ಅವರ ಮೂಗಿನಿಂದ ರಕ್ತ ಹರಿಯಲು ಶುರುವಾದುದು, ತಲೆ ಹಾಗೂ ಹಣೆಗೂ ಗಂಭೀರ ಗಾಯಗಳಾಗಿದ್ದು, ಪರಿಸ್ಥಿತಿ ತೀವ್ರಗೊಂಡಿತು. ತಕ್ಷಣವೇ ಆಂಬುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತು, ಆದರೆ ಮೂರಾಕಟ್ಟಾ ಬಳಿ ಅವರು ಕೊನೆಯುಸಿರೆಳೆದರು.
ಸ್ಥಳೀಯ ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುವ 72 ವರ್ಷದ ಮಹಾದೇವ ಮಡಿವಾಳ ಈ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರ ಮಾಹಿತಿ ಆಧಾರದ ಮೇಲೆ, ಬೈಕ್ ಸವಾರ ಪ್ರಶಾಂತ ಮಡಿವಾಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಘಟನೆಯ ಸಂಬಂಧ ಪಿಎಸ್ಐ ರವಿ ಗುಡ್ಡಿ ತನಿಖೆ ಮುಂದುವರಿಸುತ್ತಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…