ಚಿನ್ನಪ್ಪರಪಾಳ್ಯದಲ್ಲಿ ಮನೆಯೊಂದರ ಶೌಚಾಲಯದ ಗುಂಡಿಯಲ್ಲಿ ತಲೆ ಬುರುಡೆ ಮತ್ತು ಮೂಳೆ ತುಂಡು ಪತ್ತೆಯಾದ ಘಟನೆ ಗ್ರಾಮದ ಜನರಲ್ಲಿ ಆತಂಕ ಹುಟ್ಟಿಸಿದೆ.
ಈ ವಿಷಯವನ್ನು ಪ್ರಾಥಮಿಕವಾಗಿ ಗ್ರಾಮಸ್ಥ ಪ್ರವೀಣ್ ಕುಮಾರ್ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ನಂತರ ಡಿವೈಎಸ್ಪಿ ಗೋಪಾಲ್ ಹಾಗೂ ವೃತ್ತ ನಿರೀಕ್ಷಕ ಶಬ್ಬೀರ್ ಹುಸೇನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಟುಂಬದ ಹಿನ್ನೆಲೆ:
ಮೃತರ ಕುಟುಂಬದ ಪ್ರಕಾರ, ಈ ಮನೆಯಲ್ಲಿ ಮುನ್ನೂರ ತಿಂಗಳ ಹಿಂದೆ ಮೃತಪಟ್ಟ ಜಾಕೂಬ್ ಹಾಗೂ ಆತನ ಹಿರಿಯ ಪುತ್ರ ದಾಸ್ ಪ್ರಕಾಶ್ ವಾಸವಾಗಿದ್ದರು. ಆದರೆ, ದಾಸ್ ಪ್ರಕಾಶ್ ಕಳೆದ 6 ತಿಂಗಳಿನಿಂದ ಕಾಣೆಯಾಗಿದ್ದಾರೆ. ಈ ಬಗ್ಗೆ ಅವರ ಪತ್ನಿ, ಬೆಂಗಳೂರಿನಲ್ಲಿ ಮಕ್ಕಳೊಂದಿಗೆ ವಾಸಿಸುತ್ತಿರುವವರು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಮನೆಯ ಪಕ್ಕದಲ್ಲಿನ ಶೌಚಾಲಯದ ಗುಂಡಿಯಲ್ಲಿ ತಲೆ ಬುರುಡೆ ಮತ್ತು ಮೂಳೆ ತುಂಡುಗಳು ಪತ್ತೆಯಾಗಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಪೊಲೀಸರ ಸ್ಪಷ್ಟನೆ:
ಪೊಲೀಸರು ಈಗಾಗಲೇ ಕುಟುಂಬದ ಸದಸ್ಯರ ವಿಚಾರಣೆ ನಡೆಸಿದ್ದು, ಪತ್ತೆಯಾದ ಅಂಗಾಂಗ ಅವಶೇಷಗಳನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಪರೀಕ್ಷಾ ವರದಿ ಬಂದ ಬಳಿಕ ಮುಂದಿನ ಹಂತದ ತನಿಖೆ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ದಾರಿ ಹೇಗೆ ತಲುಪಿತು? ಇದು ಯಾರದಾಗಿದೆ? ಅಪರಾಧ ನಡೆದಿದೆಯಾ? ಎಂಬ ಪ್ರಶ್ನೆಗಳಿಗೆ ಮುಂದಿನ ತನಿಖೆ ಸ್ಪಷ್ಟ ಉತ್ತರ ನೀಡಲಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…