ಚಿನ್ನಪ್ಪರಪಾಳ್ಯದಲ್ಲಿ ಮನೆಯೊಂದರ ಶೌಚಾಲಯದ ಗುಂಡಿಯಲ್ಲಿ ತಲೆ ಬುರುಡೆ ಮತ್ತು ಮೂಳೆ ತುಂಡು ಪತ್ತೆಯಾದ ಘಟನೆ ಗ್ರಾಮದ ಜನರಲ್ಲಿ ಆತಂಕ ಹುಟ್ಟಿಸಿದೆ.
ಈ ವಿಷಯವನ್ನು ಪ್ರಾಥಮಿಕವಾಗಿ ಗ್ರಾಮಸ್ಥ ಪ್ರವೀಣ್ ಕುಮಾರ್ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ನಂತರ ಡಿವೈಎಸ್ಪಿ ಗೋಪಾಲ್ ಹಾಗೂ ವೃತ್ತ ನಿರೀಕ್ಷಕ ಶಬ್ಬೀರ್ ಹುಸೇನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಟುಂಬದ ಹಿನ್ನೆಲೆ:
ಮೃತರ ಕುಟುಂಬದ ಪ್ರಕಾರ, ಈ ಮನೆಯಲ್ಲಿ ಮುನ್ನೂರ ತಿಂಗಳ ಹಿಂದೆ ಮೃತಪಟ್ಟ ಜಾಕೂಬ್ ಹಾಗೂ ಆತನ ಹಿರಿಯ ಪುತ್ರ ದಾಸ್ ಪ್ರಕಾಶ್ ವಾಸವಾಗಿದ್ದರು. ಆದರೆ, ದಾಸ್ ಪ್ರಕಾಶ್ ಕಳೆದ 6 ತಿಂಗಳಿನಿಂದ ಕಾಣೆಯಾಗಿದ್ದಾರೆ. ಈ ಬಗ್ಗೆ ಅವರ ಪತ್ನಿ, ಬೆಂಗಳೂರಿನಲ್ಲಿ ಮಕ್ಕಳೊಂದಿಗೆ ವಾಸಿಸುತ್ತಿರುವವರು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಮನೆಯ ಪಕ್ಕದಲ್ಲಿನ ಶೌಚಾಲಯದ ಗುಂಡಿಯಲ್ಲಿ ತಲೆ ಬುರುಡೆ ಮತ್ತು ಮೂಳೆ ತುಂಡುಗಳು ಪತ್ತೆಯಾಗಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಪೊಲೀಸರ ಸ್ಪಷ್ಟನೆ:
ಪೊಲೀಸರು ಈಗಾಗಲೇ ಕುಟುಂಬದ ಸದಸ್ಯರ ವಿಚಾರಣೆ ನಡೆಸಿದ್ದು, ಪತ್ತೆಯಾದ ಅಂಗಾಂಗ ಅವಶೇಷಗಳನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಪರೀಕ್ಷಾ ವರದಿ ಬಂದ ಬಳಿಕ ಮುಂದಿನ ಹಂತದ ತನಿಖೆ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ದಾರಿ ಹೇಗೆ ತಲುಪಿತು? ಇದು ಯಾರದಾಗಿದೆ? ಅಪರಾಧ ನಡೆದಿದೆಯಾ? ಎಂಬ ಪ್ರಶ್ನೆಗಳಿಗೆ ಮುಂದಿನ ತನಿಖೆ ಸ್ಪಷ್ಟ ಉತ್ತರ ನೀಡಲಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…