Latest

ಅನಾರೋಗ್ಯದಿಂದ ಯೋಧನ ದುಃಖದ ಮರಣ: ಗ್ರಾಮಸ್ಥರಿಂದ ಕಣ್ಣೀರು ಪೂರ್ವಕ ಶ್ರದ್ಧಾಂಜಲಿ

ಹುಣಸಗಿ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಜುಮಾಲಾಪುರ ದೊಡ್ಡ ತಾಂಡಾ ಮೂಲದ ಯೋಧ ವೆಂಕಟೇಶ್ ಎಂ. ರಾಠೋಡ (28) ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಸಿಕ್ಕಿಂನಿಂದ ರಜೆ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ಡೆಂಗ್ಯೂ ಸೋಂಕು ತೀವ್ರಗೊಂಡ ಪರಿಣಾಮ ಬಾಗಲಕೋಟೆಯ ಕೆರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಪ್ರಾಣ ತ್ಯಜಿಸಿದರು.

ಸೈನಿಕ ಸೇವೆ ಹಾಗೂ ರಜೆ ಪ್ರವಾಸ
ವೆಂಕಟೇಶ್ ಕಳೆದ ನಾಲ್ಕು ವರ್ಷಗಳಿಂದ ಸಿಕ್ಕಿಂನಲ್ಲಿ 11ನೇ ಬೆಟಾಲಿಯನ್ ಐಟಿಬಿಪಿ (ITBP) ಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗೆ ಅವರನ್ನು ರಾಜಸ್ಥಾನದಲ್ಲಿನ 42ನೇ ಬೆಟಾಲಿಯನ್‌ಗೆ ವರ್ಗಾವಣೆ ಮಾಡಲಾಗಿತ್ತು. ಹೊಸ ಪೋಸ್ಟಿಂಗ್‌ಗೆ ತೆರಳುವ ಮುನ್ನ ಜರ್ನಿ ಪ್ರಡ್ ಅಡಿಯಲ್ಲಿ 15 ದಿನಗಳ ರಜೆ ಪಡೆದು ಸ್ವಗ್ರಾಮ ಜುಮಾಲಾಪುರಕ್ಕೆ ಬಂದಿದ್ದರು.

ಆರೋಗ್ಯ ಏಳಿಲ್ಲ, ಡೆಂಗ್ಯೂ ಪತ್ತೆ
ರಜೆ ಅವಧಿಯಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ತಪಾಸಣೆಯಲ್ಲಿ ಡೆಂಗ್ಯೂ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ತುರ್ತು ಚಿಕಿತ್ಸೆಗಾಗಿ ಬಾಗಲಕೋಟೆಯ ಕೆರೋಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.

ಪಾರ್ಥಿವ ಶರೀರದ ಮೆರವಣಿಗೆ ಮತ್ತು ಅಂತಿಮ ದರ್ಶನ
ಮೃತದೇಹವನ್ನು ಬಾಗಲಕೋಟೆ ಆಸ್ಪತ್ರೆಯಿಂದ ಅವರ ತಾಂಡಾದ ತನಕ ಆಂಬುಲೆನ್ಸ್ ಮೂಲಕ ಸಾಗಿಸಲಾಗಿತ್ತು. ಈ ವೇಳೆ ಗ್ರಾಮಸ್ಥರು “ವೆಂಕಟೇಶ್ ಅಮರ್ ರಹೇ”, “ಭಾರತ್ ಮಾತಾಕಿ ಜೈ” ಘೋಷಣೆಗಳನ್ನು ಮೊಳಗಿಸಿದರು. ಮೆರವಣಿಗೆಯಲ್ಲಿ ಮಾಜಿ ಸೈನಿಕರು, ಸ್ಥಳೀಯರು ಭಾವುಕರಾಗಿ ಪಾಲ್ಗೊಂಡರು.

ಪತ್ನಿ ಹಾಗೂ ಕುಟುಂಬದ ಆಕ್ರಂದನ
ಅಂತಿಮ ದರ್ಶನದ ವೇಳೆಯಲ್ಲಿ ವೆಂಕಟೇಶ್ ಪತ್ನಿ ಮತ್ತು ಕುಟುಂಬಸ್ಥರ ಆಕ್ರಂದನ ಹೃದಯ ವಿದ್ರಾವಕವಾಗಿತ್ತು. ಯೋಧನ ಅಗಲಿಕೆಯಿಂದ ಪೂರ್ಣ ಗ್ರಾಮದಲ್ಲಿ ದುಃಖದ ಛಾಯೆ ಆವರಿಸಿತ್ತು. ಅಂತಿಮ ದರ್ಶನಕ್ಕಾಗಿ ನಾರಾಯಣಪುರದ ಹೊರವಲಯದಲ್ಲಿ ಸಾರ್ವಜನಿಕ ವ್ಯವಸ್ಥೆ ಮಾಡಲಾಗಿತ್ತು.

ಶಾಸಕರು ಹಾಗೂ ಪೊಲೀಸ್ ಇಲಾಖೆ ವತಿಯಿಂದ ಗೌರವ
ಹುಣಸಗಿ ತಹಶೀಲ್ದಾರ್ ಹುಸೇನಾ.ಎ. ಸರ್ಕಾವಾಸ್, ಗ್ರಾಮ ಆಡಳಿತ ಅಧಿಕಾರಿ ಪರಶುರಾಮ, ಹುಣಸಗಿ ಸಿಪಿಐ ರವಿಕುಮಾರ್ ಹಾಗೂ ಕೊಡೇಕಲ್ ಪಿಎಸ್‌ಐ ಅಯ್ಯಣ್ಣ ಅವರು ಸ್ಥಳಕ್ಕೆ ಆಗಮಿಸಿ ಪೊಲೀಸರೊಂದಿಗೆ ಬಂದೋಬಸ್ತಿನ ಜವಾಬ್ದಾರಿಯನ್ನು ಹೊತ್ತುಕೊಂಡರು. ಮೃತ ಯೋಧನಿಗೆ ಅವರು ಅಂತಿಮ ನಮನ ಸಲ್ಲಿಸಿದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಪೂರ್ಣ ಸರ್ಕಾರಿ ಗೌರವಗಳೊಂದಿಗೆ ವೆಂಕಟೇಶ್ ಎಂ. ರಾಠೋಡ ಅವರ ಅಂತ್ಯಕ್ರಿಯೆ ಜುಮಾಲಾಪುರದಲ್ಲಿ ನೆರವೇರಿತು. ಈ ಸಂದರ್ಭ ಗ್ರಾಮಸ್ಥರು, ಸುತ್ತಮುತ್ತಲಿನ ಮಠಾಧೀಶರು, ಮತ್ತು ಸಾರ್ವಜನಿಕರು ಭಾಗವಹಿಸಿ ತಮ್ಮ ಶ್ರದ್ಧಾಂಜಲಿಯನ್ನು ಅರ್ಪಿಸಿದರು.

ವರದಿ: ದಾವಲಸಾಬ್

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

12 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

12 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

12 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

12 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago