ಕೆಲವು ಸೋಂಬೇರಿ ಅಧಿಕಾರಿಗಳು ತಮ್ಮ ಮನೆಗಳನ್ನು ಮಾತ್ರ ಸ್ವಚ್ಛವಾಗಿ ಕಾಪಾಡಿಕೊಳ್ಳುತ್ತಾರೆ ಆದರೆ ಸರ್ಕಾರಿ ಕಚೇರಿಗಳನ್ನು ಮಾತ್ರ ನೋಡಬಾರದ ಸ್ಥಿತಿಯಲ್ಲಿ ಇಟ್ಟುಕೊಂಡಿರುತ್ತಾರೆ. ತುಮಕೂರಿನ ಜಿಲ್ಲಾಧಿಕಾರಿ ಮತ್ತು ತಹಸಿಲ್ದಾರ್ ಕಚೇರಿ ಮುಂಭಾಗದಲ್ಲಿರುವ ಸಕಾಲ/ಭೂಮಿ ಕೇಂದ್ರದ ಕಚೇರಿಯ ಮೇಲ್ಭಾಗದಲ್ಲಿ ಸಂಪೂರ್ಣವಾಗಿ ಗಿಡಗಳು ಬೆಳೆದು ನಿಂತಿದ್ದು ಇದನ್ನು ಸ್ವಚ್ಛಗೊಳಿಸುವುದರ ಬಗ್ಗೆ ಯಾವೊಬ್ಬ ಅಧಿಕಾರಿಯ ಗಮನಹರಿಸಿರುವುದಿಲ್ಲ. ಕಟ್ಟಡದ ಮೇಲೆ ಗಿಡಮರಗಳು ಬೆಳೆದು ನಿಂತರೆ ಕಟ್ಟಡ ಶೀಥಿಲಗೊಳ್ಳುತ್ತದೆ ಹಾಗೂ ಅದರ ಆಯಸ್ಸು ಸಹ ಕಡಿಮೆಯಾಗುತ್ತದೆ ಇದು ಸರ್ಕಾರಿ ಕಚೇರಿಯಾದ ಕಾರಣ ಯಾರೊಬ್ಬರೂ ಇತ್ತ ಗಮನ ಹರಿಸದೆ ಸೋಂಬೇರಿಗಳಂತೆ ವರ್ತಿಸುತ್ತಿದ್ದಾರೆ. ಈ ಕಚೇರಿಯ ಮುಖ್ಯಸ್ಥ ನರಸಿಂಹರಾಜು ಜಿಲ್ಲಾಧ್ಯಕ್ಷ ಜಿಲ್ಲಾ ಸರಕಾರಿ ನೌಕರರ ಸಂಘ. ಈತನು ಇರುವಂತಹ ಕಚೇರಿಯ ಪರಿಸ್ಥಿತಿಯೇ ಹೀಗಿದ್ದ ಮೇಲೆ ಉಳಿದ ಸರ್ಕಾರಿ ನೌಕರರ ಕಚೇರಿಗಳ ಪರಿಸ್ಥಿತಿ ಹೇಗಿರಬಹುದು. ಇವನ ಕಚೇರಿಯನ್ನೇ ಸರಿಯಾಗಿ ಇಟ್ಟುಕೊಳ್ಳದವನು ಜಿಲ್ಲಾಧ್ಯಕ್ಷನಾಗಿ ಸರ್ಕಾರಿ ನೌಕರರಿಗೆ ಯಾವ ನೀತಿ ಪಾಠ ಮಾಡುತ್ತಾನೋ?
ಜಿಲ್ಲಾಧಿಕಾರಿಗಳ ಕಚೇರಿಯ ಬಾಗಿಲಲ್ಲಿ ನಿಂತು ನೋಡಿದರೆ ಈ ಕಚೇರಿಯ ಮೇಲೆ ಬೆಳೆದಿರುವ ಗಿಡಗಳು ಸ್ಪಷ್ಟವಾಗಿ ಕಾಣುತ್ತವೆ ಆದರೂ ಸಹ ಜಿಲ್ಲಾಧಿಕಾರಿಗಳು ಇದನ್ನು ಸರಿಪಡಿಸಲು ಮುಂದಾಗದಿರಲು ಕಾರಣವೇನು? ಜಿಲ್ಲಾಧಿಕಾರಿಗಳು ಸಹ ಸರ್ಕಾರಿ ಕಚೇರಿ ಅಲ್ಲವಾ ಎಂದೇನಾದರೂ ನಿರ್ಲಕ್ಷ ವಹಿಸುತ್ತಿದ್ದಾರಾ?
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…