ಕೆಲವು ಸೋಂಬೇರಿ ಅಧಿಕಾರಿಗಳು ತಮ್ಮ ಮನೆಗಳನ್ನು ಮಾತ್ರ ಸ್ವಚ್ಛವಾಗಿ ಕಾಪಾಡಿಕೊಳ್ಳುತ್ತಾರೆ ಆದರೆ ಸರ್ಕಾರಿ ಕಚೇರಿಗಳನ್ನು ಮಾತ್ರ ನೋಡಬಾರದ ಸ್ಥಿತಿಯಲ್ಲಿ ಇಟ್ಟುಕೊಂಡಿರುತ್ತಾರೆ. ತುಮಕೂರಿನ ಜಿಲ್ಲಾಧಿಕಾರಿ ಮತ್ತು ತಹಸಿಲ್ದಾರ್ ಕಚೇರಿ ಮುಂಭಾಗದಲ್ಲಿರುವ ಸಕಾಲ/ಭೂಮಿ ಕೇಂದ್ರದ ಕಚೇರಿಯ ಮೇಲ್ಭಾಗದಲ್ಲಿ ಸಂಪೂರ್ಣವಾಗಿ ಗಿಡಗಳು ಬೆಳೆದು ನಿಂತಿದ್ದು ಇದನ್ನು ಸ್ವಚ್ಛಗೊಳಿಸುವುದರ ಬಗ್ಗೆ ಯಾವೊಬ್ಬ ಅಧಿಕಾರಿಯ ಗಮನಹರಿಸಿರುವುದಿಲ್ಲ. ಕಟ್ಟಡದ ಮೇಲೆ ಗಿಡಮರಗಳು ಬೆಳೆದು ನಿಂತರೆ ಕಟ್ಟಡ ಶೀಥಿಲಗೊಳ್ಳುತ್ತದೆ ಹಾಗೂ ಅದರ ಆಯಸ್ಸು ಸಹ ಕಡಿಮೆಯಾಗುತ್ತದೆ ಇದು ಸರ್ಕಾರಿ ಕಚೇರಿಯಾದ ಕಾರಣ ಯಾರೊಬ್ಬರೂ ಇತ್ತ ಗಮನ ಹರಿಸದೆ ಸೋಂಬೇರಿಗಳಂತೆ ವರ್ತಿಸುತ್ತಿದ್ದಾರೆ. ಈ ಕಚೇರಿಯ ಮುಖ್ಯಸ್ಥ ನರಸಿಂಹರಾಜು ಜಿಲ್ಲಾಧ್ಯಕ್ಷ ಜಿಲ್ಲಾ ಸರಕಾರಿ ನೌಕರರ ಸಂಘ. ಈತನು ಇರುವಂತಹ ಕಚೇರಿಯ ಪರಿಸ್ಥಿತಿಯೇ ಹೀಗಿದ್ದ ಮೇಲೆ ಉಳಿದ ಸರ್ಕಾರಿ ನೌಕರರ ಕಚೇರಿಗಳ ಪರಿಸ್ಥಿತಿ ಹೇಗಿರಬಹುದು. ಇವನ ಕಚೇರಿಯನ್ನೇ ಸರಿಯಾಗಿ ಇಟ್ಟುಕೊಳ್ಳದವನು ಜಿಲ್ಲಾಧ್ಯಕ್ಷನಾಗಿ ಸರ್ಕಾರಿ ನೌಕರರಿಗೆ ಯಾವ ನೀತಿ ಪಾಠ ಮಾಡುತ್ತಾನೋ?
ಜಿಲ್ಲಾಧಿಕಾರಿಗಳ ಕಚೇರಿಯ ಬಾಗಿಲಲ್ಲಿ ನಿಂತು ನೋಡಿದರೆ ಈ ಕಚೇರಿಯ ಮೇಲೆ ಬೆಳೆದಿರುವ ಗಿಡಗಳು ಸ್ಪಷ್ಟವಾಗಿ ಕಾಣುತ್ತವೆ ಆದರೂ ಸಹ ಜಿಲ್ಲಾಧಿಕಾರಿಗಳು ಇದನ್ನು ಸರಿಪಡಿಸಲು ಮುಂದಾಗದಿರಲು ಕಾರಣವೇನು? ಜಿಲ್ಲಾಧಿಕಾರಿಗಳು ಸಹ ಸರ್ಕಾರಿ ಕಚೇರಿ ಅಲ್ಲವಾ ಎಂದೇನಾದರೂ ನಿರ್ಲಕ್ಷ ವಹಿಸುತ್ತಿದ್ದಾರಾ?
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…