Latest

ಸರ್ಕಾರಿ ಕಚೇರಿಯ ಮೇಲೆ ಬೃಂದಾವನ ಬೆಳೆಸಲು ಮುಂದಾಗಿದ್ದೀರಾ ಸೋಂಬೇರಿಗಳೇ?

ಕೆಲವು ಸೋಂಬೇರಿ ಅಧಿಕಾರಿಗಳು ತಮ್ಮ ಮನೆಗಳನ್ನು ಮಾತ್ರ ಸ್ವಚ್ಛವಾಗಿ ಕಾಪಾಡಿಕೊಳ್ಳುತ್ತಾರೆ ಆದರೆ ಸರ್ಕಾರಿ ಕಚೇರಿಗಳನ್ನು ಮಾತ್ರ ನೋಡಬಾರದ ಸ್ಥಿತಿಯಲ್ಲಿ ಇಟ್ಟುಕೊಂಡಿರುತ್ತಾರೆ. ತುಮಕೂರಿನ ಜಿಲ್ಲಾಧಿಕಾರಿ ಮತ್ತು ತಹಸಿಲ್ದಾರ್ ಕಚೇರಿ ಮುಂಭಾಗದಲ್ಲಿರುವ ಸಕಾಲ/ಭೂಮಿ ಕೇಂದ್ರದ ಕಚೇರಿಯ ಮೇಲ್ಭಾಗದಲ್ಲಿ ಸಂಪೂರ್ಣವಾಗಿ ಗಿಡಗಳು ಬೆಳೆದು ನಿಂತಿದ್ದು ಇದನ್ನು ಸ್ವಚ್ಛಗೊಳಿಸುವುದರ ಬಗ್ಗೆ ಯಾವೊಬ್ಬ ಅಧಿಕಾರಿಯ ಗಮನಹರಿಸಿರುವುದಿಲ್ಲ. ಕಟ್ಟಡದ ಮೇಲೆ ಗಿಡಮರಗಳು ಬೆಳೆದು ನಿಂತರೆ ಕಟ್ಟಡ ಶೀಥಿಲಗೊಳ್ಳುತ್ತದೆ ಹಾಗೂ ಅದರ ಆಯಸ್ಸು ಸಹ ಕಡಿಮೆಯಾಗುತ್ತದೆ ಇದು ಸರ್ಕಾರಿ ಕಚೇರಿಯಾದ ಕಾರಣ ಯಾರೊಬ್ಬರೂ ಇತ್ತ ಗಮನ ಹರಿಸದೆ ಸೋಂಬೇರಿಗಳಂತೆ ವರ್ತಿಸುತ್ತಿದ್ದಾರೆ. ಈ ಕಚೇರಿಯ ಮುಖ್ಯಸ್ಥ ನರಸಿಂಹರಾಜು ಜಿಲ್ಲಾಧ್ಯಕ್ಷ ಜಿಲ್ಲಾ ಸರಕಾರಿ ನೌಕರರ ಸಂಘ. ಈತನು ಇರುವಂತಹ ಕಚೇರಿಯ ಪರಿಸ್ಥಿತಿಯೇ ಹೀಗಿದ್ದ ಮೇಲೆ ಉಳಿದ ಸರ್ಕಾರಿ ನೌಕರರ ಕಚೇರಿಗಳ ಪರಿಸ್ಥಿತಿ ಹೇಗಿರಬಹುದು. ಇವನ ಕಚೇರಿಯನ್ನೇ ಸರಿಯಾಗಿ ಇಟ್ಟುಕೊಳ್ಳದವನು ಜಿಲ್ಲಾಧ್ಯಕ್ಷನಾಗಿ ಸರ್ಕಾರಿ ನೌಕರರಿಗೆ ಯಾವ ನೀತಿ ಪಾಠ ಮಾಡುತ್ತಾನೋ?

ಜಿಲ್ಲಾಧಿಕಾರಿಗಳ ಕಚೇರಿಯ ಬಾಗಿಲಲ್ಲಿ ನಿಂತು ನೋಡಿದರೆ ಈ ಕಚೇರಿಯ ಮೇಲೆ ಬೆಳೆದಿರುವ ಗಿಡಗಳು ಸ್ಪಷ್ಟವಾಗಿ ಕಾಣುತ್ತವೆ ಆದರೂ ಸಹ ಜಿಲ್ಲಾಧಿಕಾರಿಗಳು ಇದನ್ನು ಸರಿಪಡಿಸಲು ಮುಂದಾಗದಿರಲು ಕಾರಣವೇನು? ಜಿಲ್ಲಾಧಿಕಾರಿಗಳು ಸಹ ಸರ್ಕಾರಿ ಕಚೇರಿ ಅಲ್ಲವಾ ಎಂದೇನಾದರೂ ನಿರ್ಲಕ್ಷ ವಹಿಸುತ್ತಿದ್ದಾರಾ?

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago