Categories: CrimeLatest

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿಯನ್ನೇ ಆರೋಪಿಯಾಗಿ ಬಂಧಿಸಿದ್ದಾರೆ.

ಏಪ್ರಿಲ್ 23, 2026ರಂದು ತಾವರೆಕಟ್ಟೆ ಸಮೀಪ ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆಯ ಪಕ್ಕದ ಖಾಲಿ ಜಾಗದಲ್ಲಿ 40-45 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ 103(1), 238 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.

ಪ್ರಕರಣದ ಗಂಭೀರತೆಯನ್ನು ಗಮನಿಸಿ, ಮೈಸೂರು ನಗರ ಪೊಲೀಸ್ ಆಯುಕ್ತರ ನಿರ್ದೇಶನದಂತೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ದೇವರಾಜ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೆ. ರಾಜೇಂದ್ರ ಅವರ ಮೇಲ್ವಿಚಾರಣೆಯಲ್ಲಿ, ನಜರಬಾದ್ ಠಾಣೆಯ ಇನ್ಸ್‌ಪೆಕ್ಟರ್ ಮಹದೇವಸ್ವಾಮಿ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿತು.

ಪೊಲೀಸರು ಘಟನಾ ಸ್ಥಳದ ಸುತ್ತಮುತ್ತ ಹಾಗೂ ನಗರದಲ್ಲಿನ ವಿವಿಧ ಸ್ಥಳಗಳಲ್ಲಿ ಅಳವಡಿಸಿದ್ದ 200ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಮೃತನ ಚಲನವಲನ ಹಾಗೂ ಅನುಮಾನಿತ ವ್ಯಕ್ತಿಯ ಮಾಹಿತಿ ಸಂಗ್ರಹಿಸಿದರು. ಈ ಸುಳಿವಿನ ಆಧಾರದ ಮೇಲೆ ಮಂಜುಳಾ (60), ಕೆಸರೆ ಪ್ರದೇಶದ ನಿವಾಸಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು.

ವಿಚಾರಣೆ ವೇಳೆ, ಮೃತ ವ್ಯಕ್ತಿ ಆಕೆಯ ಎರಡನೇ ಮಗ ರಮೇಶ್ ಎಂಬುದು ಬಹಿರಂಗವಾಯಿತು. ಆತ ಮದುವೆಯಾಗದೆ ತಾಯಿಯೊಂದಿಗೇ ವಾಸವಾಗಿದ್ದು, ಮದ್ಯಪಾನದ ಚಟದಿಂದ ಬಳಲುತ್ತಿದ್ದ. ಹಣಕ್ಕಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದುದರಿಂದ ಬೇಸತ್ತ ಮಂಜುಳಾ, ಮಗನನ್ನು ಕೊಲೆ ಮಾಡುವ ನಿರ್ಧಾರ ಕೈಗೊಂಡಿದ್ದಾಗಿ ಒಪ್ಪಿಕೊಂಡಿದ್ದಾಳೆ.

ಏಪ್ರಿಲ್ 14ರಂದು ಬೆಳಿಗ್ಗೆ ರಮೇಶ್‌ನನ್ನು ಆಟೋದಲ್ಲಿ ಕರೆದುಕೊಂಡು ಚಾಮುಂಡಿ ಬೆಟ್ಟದ ರಸ್ತೆಯ ತಾವರೆಕಟ್ಟೆ ಬಳಿ ಕರೆದುಕೊಂಡು ಹೋಗಿ, ಖಾಲಿ ಜಾಗದಲ್ಲಿ ದೊಣ್ಣೆ ಮತ್ತು ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿ ಮಂಜುಳಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಉಪ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಹಾಗೂ ನಜರಬಾದ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಹತ್ವದ ಪಾತ್ರವಹಿಸಿದ್ದು, ಅವರ ಕಾರ್ಯಕ್ಷಮತೆಯನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪ್ರಶಂಸಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಸಗಿ ವಿಡಿಯೋ ಬೆದರಿಕೆ, ಕೋಟಿ ರೂ. ಬೇಡಿಕೆ: ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್…

2 hours ago

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

3 hours ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

7 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

11 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

11 hours ago

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

1 day ago