Latest

ಸೊನ್ನ ಗ್ರಾಮದಲ್ಲಿ ರಸ್ತೆಯಲ್ಲ ಚರಂಡಿಮಯ!

ಕಲಬುರಗಿ: ಭಾರತ ಸರ್ಕಾರವು ಸ್ವಚ್ಛತೆಗೆ ಅಂತ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಗ್ರಾಮೀಣ ಮಟ್ಟದಲ್ಲಿ ಸ್ವಚ್ಛತೆ ಕಾಪಾಡಲು ಗ್ರಾಮ ಪಂಚಾಯಿತಿಗಳಿಗೆ ಸ್ವಚ್ಛ ಭಾರತ ಅಭಿಯಾನದ ಮೂಲಕ ದ್ವಿಚಕ್ರ ವಾಹನ ಕೂಡ ಪ್ರತಿ ಗ್ರಾಮ ಪಂಚಾಯಿತಿ ಗೆ ನೀಡಲಾಗಿದೆ. ಆದರೆ ಅದು ಸರಿಯಾಗಿ ಉಪಯೋಗ ಆಗುತ್ತಿಲ್ಲ ಎಂಬುದು ಕಂಡುಬರುತ್ತದೆ.

ಸ್ವಚ್ಛತೆ ಬಗ್ಗೆಯೇ ತಿರುಗಿ ನೋಡದ ಪಿಡಿಒ ಇನ್ನೂ ಗ್ರಾಮ ಅಭಿವೃದ್ಧಿ ಮಾಡ್ತಾ ಇದ್ದಾನೆ. ಎಂದರೆ ನಂಬಲಾಗದ ವಿಷಯ ಗ್ರಾಮ ಪಂಚಾಯಿತಿ ಯ ಅಭಿವೃದ್ಧಿ ಅಧಿಕಾರಿಯಾದ ನಾಗೇಂದ್ರಪ್ಪ ಪಿಡಿಒ ಅವರು ಗ್ರಾಮ ಪಂಚಾಯಿತಿ ದುಡ್ಡು ಹೊಡೆಯುವ ಕೆಲಸ ಮಾತ್ರ ಮಾಡುತ್ತಾರೆ ಎಂಬ ಮಾತು ಅಲ್ಲಲ್ಲಿ ಗುಸುಗುಸು ಮಾತನಾಡಿಕೊಳ್ಳುತ್ತಿದ್ದಾರೆ.ಅಷ್ಟಕ್ಕೂ ಹೇಳಲು ಹೊರಟಿರುವ ವಿಷಯ ಏನಂದರೆ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮ ಪಂಚಾಯಿತಿ ಹೊಂದಿರುವ ಗ್ರಾಮದ ದುಸ್ಥಿತಿ ಇದು. ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂದಗಡೆ.ಸ್ವಚ್ಛತೆ ಕಾಣದೆ ಆಸ್ಪತ್ರೆಗೆ ಹೋಗುತ್ತಿದ್ದಾರೆ ಜನರು ರೋಗ ತೆಗೆದುಕೊಂಡು ಹೋಗುವ ಹಾಗೆ ಪರಿಸ್ಥಿತಿ ನಿರ್ಮಾಣವಾಗಿದೆ.

ಅದು ಹಂದಿಗಳ ತಾಣವಾಗಿದೆ.ಸರ್ಕಾರಿ ಶಾಲೆಯ ಹಿಂದೆಗಡೆ ಐಬಿ ಯಿಂದ ಹೋಗುವ ರಸ್ತೆ ಚರಂಡಿ ಭಾನು ಭಗವಾನ್ ಮನೆ ಹತ್ತಿರ ಹಾಗೂ ಗ್ರಾಮದಲ್ಲಿ ಇಂತಹ ದುಸ್ಥಿತಿ ಇದೆ. ಅದು ಪಿಡಿಓ ನಾಗೇಂದ್ರಪ್ಪ ಅವರಿಗೆ ಕಾಣಲಿಲ್ಲವೇ!? ಎಂಬುದು ಪ್ರಶ್ನೆಯಾಗಿದೆ. ಮತ್ತು ಗ್ರಾಮದಲ್ಲಿ ಅನೇಕ ಓಣಿಯಲ್ಲಿ ಗಬ್ಬೆದ್ದು ರಸ್ತೆಯಲ್ಲ ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿಸಿ ಚರಂಡಿ ಒಳಗಡೆ ಕಸದ ರಾಶಿ ರಾಶಿ ಬಿದ್ದಿದ್ದು ಕಾಣಲಿಲ್ಲವಾ ಎಂಬುವುದು ಶೋಚನೀಯ ವಿಷಯ ಗ್ರಾಮದ ಕೆಲವೊಂದು ಕಡೆ ರಸ್ತೆಗಳೇ ಚರಂಡಿಮಾಯ ಆಗಿದ್ದರು.ಈ ಕಡೆ ಯಾವೊಬ್ಬ ಅಧಿಕಾರಿಯೂ ಇತ್ತ ಗಮನ ಹರಿಸುತ್ತಿಲ್ಲ.

ಕಳೆದ ಒಂದು ವರ್ಷಗಳಿಂದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹೇಳಿದ್ರು ಕೂಡ ಅವರು ಇತ್ತ ಗಮನ ಹರಿಸದೆ ಇದ್ದಾರೆ ಎಂಬುದು ಅಲ್ಲಿನ ಜನರ ಅಭಿಪ್ರಾಯ. ಗ್ರಾಮದ ಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ವರದಿ ನೋಡಿಯಾದರೂ ಗ್ರಾಮದ ಸುರಕ್ಷತೆಯ ಬಗ್ಗೆ ಅರಿವೇ ಇಲ್ಲದ ಪಿಡಿಓ. ನಾಗೇಂದ್ರಪ್ಪ ಅವರು ಸ್ವಚ್ಛತೆ ಕಡೆಗೆ ಗಮನ ಹರಿಸುತ್ತಾರೆ ಎಂಬುದನು ಕಾದು ನೋಡೋಣ.

ವರದಿ:ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago