Latest

ಸೊನ್ನ ಗ್ರಾಮದಲ್ಲಿ ರಸ್ತೆಯಲ್ಲ ಚರಂಡಿಮಯ!

ಕಲಬುರಗಿ: ಭಾರತ ಸರ್ಕಾರವು ಸ್ವಚ್ಛತೆಗೆ ಅಂತ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಗ್ರಾಮೀಣ ಮಟ್ಟದಲ್ಲಿ ಸ್ವಚ್ಛತೆ ಕಾಪಾಡಲು ಗ್ರಾಮ ಪಂಚಾಯಿತಿಗಳಿಗೆ ಸ್ವಚ್ಛ ಭಾರತ ಅಭಿಯಾನದ ಮೂಲಕ ದ್ವಿಚಕ್ರ ವಾಹನ ಕೂಡ ಪ್ರತಿ ಗ್ರಾಮ ಪಂಚಾಯಿತಿ ಗೆ ನೀಡಲಾಗಿದೆ. ಆದರೆ ಅದು ಸರಿಯಾಗಿ ಉಪಯೋಗ ಆಗುತ್ತಿಲ್ಲ ಎಂಬುದು ಕಂಡುಬರುತ್ತದೆ.

ಸ್ವಚ್ಛತೆ ಬಗ್ಗೆಯೇ ತಿರುಗಿ ನೋಡದ ಪಿಡಿಒ ಇನ್ನೂ ಗ್ರಾಮ ಅಭಿವೃದ್ಧಿ ಮಾಡ್ತಾ ಇದ್ದಾನೆ. ಎಂದರೆ ನಂಬಲಾಗದ ವಿಷಯ ಗ್ರಾಮ ಪಂಚಾಯಿತಿ ಯ ಅಭಿವೃದ್ಧಿ ಅಧಿಕಾರಿಯಾದ ನಾಗೇಂದ್ರಪ್ಪ ಪಿಡಿಒ ಅವರು ಗ್ರಾಮ ಪಂಚಾಯಿತಿ ದುಡ್ಡು ಹೊಡೆಯುವ ಕೆಲಸ ಮಾತ್ರ ಮಾಡುತ್ತಾರೆ ಎಂಬ ಮಾತು ಅಲ್ಲಲ್ಲಿ ಗುಸುಗುಸು ಮಾತನಾಡಿಕೊಳ್ಳುತ್ತಿದ್ದಾರೆ.ಅಷ್ಟಕ್ಕೂ ಹೇಳಲು ಹೊರಟಿರುವ ವಿಷಯ ಏನಂದರೆ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮ ಪಂಚಾಯಿತಿ ಹೊಂದಿರುವ ಗ್ರಾಮದ ದುಸ್ಥಿತಿ ಇದು. ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂದಗಡೆ.ಸ್ವಚ್ಛತೆ ಕಾಣದೆ ಆಸ್ಪತ್ರೆಗೆ ಹೋಗುತ್ತಿದ್ದಾರೆ ಜನರು ರೋಗ ತೆಗೆದುಕೊಂಡು ಹೋಗುವ ಹಾಗೆ ಪರಿಸ್ಥಿತಿ ನಿರ್ಮಾಣವಾಗಿದೆ.

ಅದು ಹಂದಿಗಳ ತಾಣವಾಗಿದೆ.ಸರ್ಕಾರಿ ಶಾಲೆಯ ಹಿಂದೆಗಡೆ ಐಬಿ ಯಿಂದ ಹೋಗುವ ರಸ್ತೆ ಚರಂಡಿ ಭಾನು ಭಗವಾನ್ ಮನೆ ಹತ್ತಿರ ಹಾಗೂ ಗ್ರಾಮದಲ್ಲಿ ಇಂತಹ ದುಸ್ಥಿತಿ ಇದೆ. ಅದು ಪಿಡಿಓ ನಾಗೇಂದ್ರಪ್ಪ ಅವರಿಗೆ ಕಾಣಲಿಲ್ಲವೇ!? ಎಂಬುದು ಪ್ರಶ್ನೆಯಾಗಿದೆ. ಮತ್ತು ಗ್ರಾಮದಲ್ಲಿ ಅನೇಕ ಓಣಿಯಲ್ಲಿ ಗಬ್ಬೆದ್ದು ರಸ್ತೆಯಲ್ಲ ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿಸಿ ಚರಂಡಿ ಒಳಗಡೆ ಕಸದ ರಾಶಿ ರಾಶಿ ಬಿದ್ದಿದ್ದು ಕಾಣಲಿಲ್ಲವಾ ಎಂಬುವುದು ಶೋಚನೀಯ ವಿಷಯ ಗ್ರಾಮದ ಕೆಲವೊಂದು ಕಡೆ ರಸ್ತೆಗಳೇ ಚರಂಡಿಮಾಯ ಆಗಿದ್ದರು.ಈ ಕಡೆ ಯಾವೊಬ್ಬ ಅಧಿಕಾರಿಯೂ ಇತ್ತ ಗಮನ ಹರಿಸುತ್ತಿಲ್ಲ.

ಕಳೆದ ಒಂದು ವರ್ಷಗಳಿಂದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹೇಳಿದ್ರು ಕೂಡ ಅವರು ಇತ್ತ ಗಮನ ಹರಿಸದೆ ಇದ್ದಾರೆ ಎಂಬುದು ಅಲ್ಲಿನ ಜನರ ಅಭಿಪ್ರಾಯ. ಗ್ರಾಮದ ಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ವರದಿ ನೋಡಿಯಾದರೂ ಗ್ರಾಮದ ಸುರಕ್ಷತೆಯ ಬಗ್ಗೆ ಅರಿವೇ ಇಲ್ಲದ ಪಿಡಿಓ. ನಾಗೇಂದ್ರಪ್ಪ ಅವರು ಸ್ವಚ್ಛತೆ ಕಡೆಗೆ ಗಮನ ಹರಿಸುತ್ತಾರೆ ಎಂಬುದನು ಕಾದು ನೋಡೋಣ.

ವರದಿ:ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

15 hours ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

15 hours ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

15 hours ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

15 hours ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

15 hours ago

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…

15 hours ago