Latest

ಸ್ವಂತ ತಾಯಿಯ ಶವಸಂಸ್ಕಾರಕ್ಕೆ 40 ಲಕ್ಷ ಬೇಡಿಕೆ ಇಟ್ಟ ಪುತ್ರರು.

ದೊಡ್ಡ ಕುರುಗೋಡು ಗ್ರಾಮದ ಅನಂತಕ್ಕ ಎಂಬ ವೃದ್ಧೆಯ ಶವಸಂಸ್ಕಾರಕ್ಕೆ ಆಕೆಯ ಪುತ್ರರು ₹40 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ತಾಯಿ ಶವವನ್ನು ಜಮೀನಿನಲ್ಲಿ ತಂದೆಯ ಸಮಾಧಿ ಪಕ್ಕದಲ್ಲಿ ಹೂಳಲು ನಿರ್ಧರಿಸಿದ ಅನಂತಕ್ಕನ ನಾಲ್ವರು ಪುತ್ರಿಯರು, ಶವವನ್ನು ಸ್ವಂತ ಗ್ರಾಮಕ್ಕೆ ತಂದು ಹೊಲದಲ್ಲಿ ಇರಿಸಿದರು. ಆದರೆ, ಅವರ ಇಬ್ಬರು ಸಹೋದರರು ತಾಯಿಯ ಅಂತ್ಯಸಂಸ್ಕಾರಕ್ಕೆ ₹40 ಲಕ್ಷ ನೀಡುವಂತೆ ಪಟ್ಟು ಹಿಡಿದರು. ಇದರಿಂದಾಗಿ, ವೃದ್ಧೆಯ ಶವ ಹೊಲದಲ್ಲಿ ಗಂಟೆಗಳ ಕಾಲ ಬಿಸಿಲಿನಲ್ಲಿ ಉಳಿಯಬೇಕಾಯಿತು.

ಹೀನಾಯ ವರ್ತನೆಯನ್ನು ತಾಳಲಾರದ ಪುತ್ರಿಯರು ತಾಯಿಯ ಶವವನ್ನು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಕೊಂಡೊಯ್ದು, ಸಹೋದರರ ವಿರುದ್ಧ ಪ್ರಕರಣ ದಾಖಲಿಸಲು ಒತ್ತಾಯಿಸಿದರು.

ಪರಿಹಾರದ ಹಣವೇ ವೈಮನಸ್ಸಿಗೆ ಕಾರಣ

ಅನಂತಕ್ಕ ಅವರ ಹೆಸರಿನಲ್ಲಿ ಇದ್ದ ಎರಡು ಎಕರೆ ಜಮೀನನ್ನು ಕೈಗಾರಿಕಾ ಬಳಕೆಗೆ ಕೆಐಎಡಿಬಿ ವಶಪಡಿಸಿಕೊಂಡು, ಇದಕ್ಕೆ ₹90 ಲಕ್ಷ ಪರಿಹಾರ ನೀಡಿತ್ತು. ಈ ಹಣವನ್ನು ಇಬ್ಬರು ಪುತ್ರರು ಸಮನಾಗಿ ಹಂಚಿಕೊಂಡಿದ್ದರು. ಆದರೆ, ನಾಲ್ವರು ಪುತ್ರಿಯರು ನ್ಯಾಯಾಲಯದ ಮೊರೆ ಹೋಗಿ ತಮ್ಮ ಪಾಲಿನ ಹಣವನ್ನು ಪಡೆದಿದ್ದರು. ಈಗ, ಅದೇ ಹಣವನ್ನು ವಾಪಸ್ ನೀಡುವಂತೆ ಇಬ್ಬರು ಪುತ್ರರು ಒತ್ತಾಯಿಸುತ್ತಿದ್ದರೆ, ಈ ಬಗ್ಗೆ ವೃದ್ಧೆಯ ಮೊಮ್ಮಗಳು ಶಾಂತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ.

ಈ ವಿಷಯ ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಅವರ ಗಮನಕ್ಕೆ ಬಂದ ಕೂಡಲೇ ಅವರು ಸ್ಥಳಕ್ಕೆ ಆಗಮಿಸಿ ಮೃತರ ಎಲ್ಲಾ ಮಕ್ಕಳೊಂದಿಗೆ ಚರ್ಚಿಸಿ, ಅಂತಿಮವಾಗಿ ಶವಸಂಸ್ಕಾರಕ್ಕೆ ಅವಕಾಶ ಕಲ್ಪಿಸಿದರು.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago