Latest

ಸ್ವಂತ ತಾಯಿಯ ಶವಸಂಸ್ಕಾರಕ್ಕೆ 40 ಲಕ್ಷ ಬೇಡಿಕೆ ಇಟ್ಟ ಪುತ್ರರು.

ದೊಡ್ಡ ಕುರುಗೋಡು ಗ್ರಾಮದ ಅನಂತಕ್ಕ ಎಂಬ ವೃದ್ಧೆಯ ಶವಸಂಸ್ಕಾರಕ್ಕೆ ಆಕೆಯ ಪುತ್ರರು ₹40 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ತಾಯಿ ಶವವನ್ನು ಜಮೀನಿನಲ್ಲಿ ತಂದೆಯ ಸಮಾಧಿ ಪಕ್ಕದಲ್ಲಿ ಹೂಳಲು ನಿರ್ಧರಿಸಿದ ಅನಂತಕ್ಕನ ನಾಲ್ವರು ಪುತ್ರಿಯರು, ಶವವನ್ನು ಸ್ವಂತ ಗ್ರಾಮಕ್ಕೆ ತಂದು ಹೊಲದಲ್ಲಿ ಇರಿಸಿದರು. ಆದರೆ, ಅವರ ಇಬ್ಬರು ಸಹೋದರರು ತಾಯಿಯ ಅಂತ್ಯಸಂಸ್ಕಾರಕ್ಕೆ ₹40 ಲಕ್ಷ ನೀಡುವಂತೆ ಪಟ್ಟು ಹಿಡಿದರು. ಇದರಿಂದಾಗಿ, ವೃದ್ಧೆಯ ಶವ ಹೊಲದಲ್ಲಿ ಗಂಟೆಗಳ ಕಾಲ ಬಿಸಿಲಿನಲ್ಲಿ ಉಳಿಯಬೇಕಾಯಿತು.

ಹೀನಾಯ ವರ್ತನೆಯನ್ನು ತಾಳಲಾರದ ಪುತ್ರಿಯರು ತಾಯಿಯ ಶವವನ್ನು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಕೊಂಡೊಯ್ದು, ಸಹೋದರರ ವಿರುದ್ಧ ಪ್ರಕರಣ ದಾಖಲಿಸಲು ಒತ್ತಾಯಿಸಿದರು.

ಪರಿಹಾರದ ಹಣವೇ ವೈಮನಸ್ಸಿಗೆ ಕಾರಣ

ಅನಂತಕ್ಕ ಅವರ ಹೆಸರಿನಲ್ಲಿ ಇದ್ದ ಎರಡು ಎಕರೆ ಜಮೀನನ್ನು ಕೈಗಾರಿಕಾ ಬಳಕೆಗೆ ಕೆಐಎಡಿಬಿ ವಶಪಡಿಸಿಕೊಂಡು, ಇದಕ್ಕೆ ₹90 ಲಕ್ಷ ಪರಿಹಾರ ನೀಡಿತ್ತು. ಈ ಹಣವನ್ನು ಇಬ್ಬರು ಪುತ್ರರು ಸಮನಾಗಿ ಹಂಚಿಕೊಂಡಿದ್ದರು. ಆದರೆ, ನಾಲ್ವರು ಪುತ್ರಿಯರು ನ್ಯಾಯಾಲಯದ ಮೊರೆ ಹೋಗಿ ತಮ್ಮ ಪಾಲಿನ ಹಣವನ್ನು ಪಡೆದಿದ್ದರು. ಈಗ, ಅದೇ ಹಣವನ್ನು ವಾಪಸ್ ನೀಡುವಂತೆ ಇಬ್ಬರು ಪುತ್ರರು ಒತ್ತಾಯಿಸುತ್ತಿದ್ದರೆ, ಈ ಬಗ್ಗೆ ವೃದ್ಧೆಯ ಮೊಮ್ಮಗಳು ಶಾಂತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ.

ಈ ವಿಷಯ ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಅವರ ಗಮನಕ್ಕೆ ಬಂದ ಕೂಡಲೇ ಅವರು ಸ್ಥಳಕ್ಕೆ ಆಗಮಿಸಿ ಮೃತರ ಎಲ್ಲಾ ಮಕ್ಕಳೊಂದಿಗೆ ಚರ್ಚಿಸಿ, ಅಂತಿಮವಾಗಿ ಶವಸಂಸ್ಕಾರಕ್ಕೆ ಅವಕಾಶ ಕಲ್ಪಿಸಿದರು.

ಭ್ರಷ್ಟರ ಬೇಟೆ

Recent Posts

ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣ ;ಕಾಡಿಗೆ ಕರೆದೊಯ್ದು ತಮ್ಮನಿಂದ ಭೀಕರ ಕೊಲೆ..!

ಉತ್ತರ ಕನ್ನಡ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ತಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ…

2 minutes ago

ಗದಗದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ದೂರು; ಎಫ್‌ಐಆರ್ ವಿಳಂಬ ಆರೋಪ

ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್‌ಸಿ…

1 hour ago

ರಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಶಿರಸಿ ಆಟೋ ಚಾಲಕರ ಸಂಘ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…

1 hour ago

ಶಿರಸಿ ಬಸ್ ನಿಲ್ದಾಣದಲ್ಲಿ 1.59 ಲಕ್ಷ ರೂ. ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು; ಬೆಂಗಳೂರು ಮೂಲದ ಮಹಿಳೆ ಬಂಧನ

ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…

1 hour ago

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

20 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

1 day ago