ದೊಡ್ಡ ಕುರುಗೋಡು ಗ್ರಾಮದ ಅನಂತಕ್ಕ ಎಂಬ ವೃದ್ಧೆಯ ಶವಸಂಸ್ಕಾರಕ್ಕೆ ಆಕೆಯ ಪುತ್ರರು ₹40 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ತಾಯಿ ಶವವನ್ನು ಜಮೀನಿನಲ್ಲಿ ತಂದೆಯ ಸಮಾಧಿ ಪಕ್ಕದಲ್ಲಿ ಹೂಳಲು ನಿರ್ಧರಿಸಿದ ಅನಂತಕ್ಕನ ನಾಲ್ವರು ಪುತ್ರಿಯರು, ಶವವನ್ನು ಸ್ವಂತ ಗ್ರಾಮಕ್ಕೆ ತಂದು ಹೊಲದಲ್ಲಿ ಇರಿಸಿದರು. ಆದರೆ, ಅವರ ಇಬ್ಬರು ಸಹೋದರರು ತಾಯಿಯ ಅಂತ್ಯಸಂಸ್ಕಾರಕ್ಕೆ ₹40 ಲಕ್ಷ ನೀಡುವಂತೆ ಪಟ್ಟು ಹಿಡಿದರು. ಇದರಿಂದಾಗಿ, ವೃದ್ಧೆಯ ಶವ ಹೊಲದಲ್ಲಿ ಗಂಟೆಗಳ ಕಾಲ ಬಿಸಿಲಿನಲ್ಲಿ ಉಳಿಯಬೇಕಾಯಿತು.
ಹೀನಾಯ ವರ್ತನೆಯನ್ನು ತಾಳಲಾರದ ಪುತ್ರಿಯರು ತಾಯಿಯ ಶವವನ್ನು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಕೊಂಡೊಯ್ದು, ಸಹೋದರರ ವಿರುದ್ಧ ಪ್ರಕರಣ ದಾಖಲಿಸಲು ಒತ್ತಾಯಿಸಿದರು.
ಪರಿಹಾರದ ಹಣವೇ ವೈಮನಸ್ಸಿಗೆ ಕಾರಣ
ಅನಂತಕ್ಕ ಅವರ ಹೆಸರಿನಲ್ಲಿ ಇದ್ದ ಎರಡು ಎಕರೆ ಜಮೀನನ್ನು ಕೈಗಾರಿಕಾ ಬಳಕೆಗೆ ಕೆಐಎಡಿಬಿ ವಶಪಡಿಸಿಕೊಂಡು, ಇದಕ್ಕೆ ₹90 ಲಕ್ಷ ಪರಿಹಾರ ನೀಡಿತ್ತು. ಈ ಹಣವನ್ನು ಇಬ್ಬರು ಪುತ್ರರು ಸಮನಾಗಿ ಹಂಚಿಕೊಂಡಿದ್ದರು. ಆದರೆ, ನಾಲ್ವರು ಪುತ್ರಿಯರು ನ್ಯಾಯಾಲಯದ ಮೊರೆ ಹೋಗಿ ತಮ್ಮ ಪಾಲಿನ ಹಣವನ್ನು ಪಡೆದಿದ್ದರು. ಈಗ, ಅದೇ ಹಣವನ್ನು ವಾಪಸ್ ನೀಡುವಂತೆ ಇಬ್ಬರು ಪುತ್ರರು ಒತ್ತಾಯಿಸುತ್ತಿದ್ದರೆ, ಈ ಬಗ್ಗೆ ವೃದ್ಧೆಯ ಮೊಮ್ಮಗಳು ಶಾಂತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ.
ಈ ವಿಷಯ ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಅವರ ಗಮನಕ್ಕೆ ಬಂದ ಕೂಡಲೇ ಅವರು ಸ್ಥಳಕ್ಕೆ ಆಗಮಿಸಿ ಮೃತರ ಎಲ್ಲಾ ಮಕ್ಕಳೊಂದಿಗೆ ಚರ್ಚಿಸಿ, ಅಂತಿಮವಾಗಿ ಶವಸಂಸ್ಕಾರಕ್ಕೆ ಅವಕಾಶ ಕಲ್ಪಿಸಿದರು.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…