Latest

ಸ್ವಂತ ತಾಯಿಯ ಶವಸಂಸ್ಕಾರಕ್ಕೆ 40 ಲಕ್ಷ ಬೇಡಿಕೆ ಇಟ್ಟ ಪುತ್ರರು.

ದೊಡ್ಡ ಕುರುಗೋಡು ಗ್ರಾಮದ ಅನಂತಕ್ಕ ಎಂಬ ವೃದ್ಧೆಯ ಶವಸಂಸ್ಕಾರಕ್ಕೆ ಆಕೆಯ ಪುತ್ರರು ₹40 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ತಾಯಿ ಶವವನ್ನು ಜಮೀನಿನಲ್ಲಿ ತಂದೆಯ ಸಮಾಧಿ ಪಕ್ಕದಲ್ಲಿ ಹೂಳಲು ನಿರ್ಧರಿಸಿದ ಅನಂತಕ್ಕನ ನಾಲ್ವರು ಪುತ್ರಿಯರು, ಶವವನ್ನು ಸ್ವಂತ ಗ್ರಾಮಕ್ಕೆ ತಂದು ಹೊಲದಲ್ಲಿ ಇರಿಸಿದರು. ಆದರೆ, ಅವರ ಇಬ್ಬರು ಸಹೋದರರು ತಾಯಿಯ ಅಂತ್ಯಸಂಸ್ಕಾರಕ್ಕೆ ₹40 ಲಕ್ಷ ನೀಡುವಂತೆ ಪಟ್ಟು ಹಿಡಿದರು. ಇದರಿಂದಾಗಿ, ವೃದ್ಧೆಯ ಶವ ಹೊಲದಲ್ಲಿ ಗಂಟೆಗಳ ಕಾಲ ಬಿಸಿಲಿನಲ್ಲಿ ಉಳಿಯಬೇಕಾಯಿತು.

ಹೀನಾಯ ವರ್ತನೆಯನ್ನು ತಾಳಲಾರದ ಪುತ್ರಿಯರು ತಾಯಿಯ ಶವವನ್ನು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಕೊಂಡೊಯ್ದು, ಸಹೋದರರ ವಿರುದ್ಧ ಪ್ರಕರಣ ದಾಖಲಿಸಲು ಒತ್ತಾಯಿಸಿದರು.

ಪರಿಹಾರದ ಹಣವೇ ವೈಮನಸ್ಸಿಗೆ ಕಾರಣ

ಅನಂತಕ್ಕ ಅವರ ಹೆಸರಿನಲ್ಲಿ ಇದ್ದ ಎರಡು ಎಕರೆ ಜಮೀನನ್ನು ಕೈಗಾರಿಕಾ ಬಳಕೆಗೆ ಕೆಐಎಡಿಬಿ ವಶಪಡಿಸಿಕೊಂಡು, ಇದಕ್ಕೆ ₹90 ಲಕ್ಷ ಪರಿಹಾರ ನೀಡಿತ್ತು. ಈ ಹಣವನ್ನು ಇಬ್ಬರು ಪುತ್ರರು ಸಮನಾಗಿ ಹಂಚಿಕೊಂಡಿದ್ದರು. ಆದರೆ, ನಾಲ್ವರು ಪುತ್ರಿಯರು ನ್ಯಾಯಾಲಯದ ಮೊರೆ ಹೋಗಿ ತಮ್ಮ ಪಾಲಿನ ಹಣವನ್ನು ಪಡೆದಿದ್ದರು. ಈಗ, ಅದೇ ಹಣವನ್ನು ವಾಪಸ್ ನೀಡುವಂತೆ ಇಬ್ಬರು ಪುತ್ರರು ಒತ್ತಾಯಿಸುತ್ತಿದ್ದರೆ, ಈ ಬಗ್ಗೆ ವೃದ್ಧೆಯ ಮೊಮ್ಮಗಳು ಶಾಂತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ.

ಈ ವಿಷಯ ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಅವರ ಗಮನಕ್ಕೆ ಬಂದ ಕೂಡಲೇ ಅವರು ಸ್ಥಳಕ್ಕೆ ಆಗಮಿಸಿ ಮೃತರ ಎಲ್ಲಾ ಮಕ್ಕಳೊಂದಿಗೆ ಚರ್ಚಿಸಿ, ಅಂತಿಮವಾಗಿ ಶವಸಂಸ್ಕಾರಕ್ಕೆ ಅವಕಾಶ ಕಲ್ಪಿಸಿದರು.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

3 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

3 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

3 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

3 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago