Categories: Latest

25 ಲಕ್ಷದ ಐಷಾರಾಮಿ ಕಾರು ಖರೀದಿಸಿದ ಸೋನು ಶ್ರೀನಿವಾಸ್ ಗೌಡ; ಅಶ್ಲೀಲ ಕಾಮೆಂಟ್‌ಗಳಿಗೆ ಖಡಕ್ ತಿರುಗೇಟು!

ಸೋಶಿಯಲ್ ಮೀಡಿಯಾದ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಸೋನು ಶ್ರೀನಿವಾಸ್ ಗೌಡ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಟ್ರೋಲ್ಸ್‌ಗಳ ಮೂಲಕವೇ ಹೆಚ್ಚು ಗುರುತಿಸಿಕೊಂಡಿದ್ದ ಸೋನು, ಇದೀಗ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ ಕಿಯಾ ಸೆಲ್ಟೋಸ್‌ ಕಾರು ಖರೀದಿಸಿದ್ದು, ತಮ್ಮ ಐದು ವರ್ಷದ ಕನಸು ನನಸಾಗಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಹೊಸ ಕಾರಿನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬೆನ್ನಲ್ಲೇ ಅವರಿಗೆ ಅಭಿನಂದನೆಗಳ ಜೊತೆಗೆ ಅಸಭ್ಯ ಹಾಗೂ ಅಶ್ಲೀಲ ಕಾಮೆಂಟ್‌ಗಳ ಸುರಿಮಳೆಯೂ ಎದುರಾಯಿತು. ಈ ಬೆಳವಣಿಗೆಯಿಂದ ಬೇಸರಗೊಂಡ ಸೋನು, ತಮ್ಮ ಯೂಟ್ಯೂಬ್‌ ವ್ಲಾಗ್‌ನಲ್ಲಿ ಕಾಮೆಂಟ್ ಮಾಡಿದವರಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

“ಒಬ್ಬ ಹುಡುಗಿ ಮನೆ, ಕಾರು ಅಥವಾ ಚಿನ್ನ ಖರೀದಿಸಿದರೆ ಅದು ಕೆಟ್ಟ ದಾರಿಯಲ್ಲಿ ಸಂಪಾದಿಸಿದ ಹಣ ಎಂಬ ಮನೋಭಾವ ಕೆಲವರಲ್ಲಿದೆ. ಆದರೆ ಅದೇ ಸಾಧನೆಯನ್ನು ಒಬ್ಬ ಹುಡುಗ ಮಾಡಿದರೆ ಮಾತ್ರ ಎಲ್ಲರೂ ಒಳ್ಳೆಯ ರೀತಿಯಲ್ಲಿ ದುಡಿದು ಸಂಪಾದಿಸಿದ್ದಾನೆ ಎಂದು ನಂಬುತ್ತಾರೆ. ನಮ್ಮ ಸಮಾಜದಲ್ಲಿರುವ ಈ ದ್ವಂದ್ವ ಮನಸ್ಥಿತಿಯೇ ವಿಷಾದಕರ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ತಮ್ಮ ಕಾರು ಖರೀದಿಯ ಬಗ್ಗೆ ಸ್ಪಷ್ಟನೆ ನೀಡಿದ ಸೋನು, “ನಾನು ಕೆಟ್ಟ ದಾರಿಯಲ್ಲಿ ಹಣ ಸಂಪಾದಿಸಿದ್ದರೆ ಒಂದು ಕಾರು ಖರೀದಿಸಲು ಇಷ್ಟು ವರ್ಷ ಕಾಯಬೇಕಾಗುತ್ತಿರಲಿಲ್ಲ. ಈ ಕಾರನ್ನು ನಾನು ಸಾಲದ ಮೂಲಕ ಖರೀದಿಸಿದ್ದೇನೆ. ಐದು ಲಕ್ಷ ರೂಪಾಯಿ ಡೌನ್ ಪೇಮೆಂಟ್ ಮಾಡಿ, ಉಳಿದ ಹಣವನ್ನು ಲೋನ್‌ನಲ್ಲಿ ಪಡೆದುಕೊಂಡಿದ್ದೇನೆ,” ಎಂದು ತಿಳಿಸಿದ್ದಾರೆ.

ಕಳೆದ ಆರು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ವಿಡಿಯೋಗಳನ್ನು ಮಾಡುತ್ತಿದ್ದು, ಹಲವು ಬ್ರ್ಯಾಂಡ್‌ಗಳನ್ನು ಪ್ರಚಾರ ಮಾಡುವ ಮೂಲಕ ಆದಾಯ ಗಳಿಸುತ್ತಿದ್ದೇನೆ. ಜೊತೆಗೆ ಒಂದು ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದು, ತಿಂಗಳಿಗೆ ಒಂದು ಲಕ್ಷ ರೂಪಾಯಿಗೂ ಹೆಚ್ಚು ಸಂಬಳ ಪಡೆಯುತ್ತಿದ್ದೇನೆ ಎಂದು ಸೋನು ವಿವರಿಸಿದರು.

ಅಶ್ಲೀಲ ಕಾಮೆಂಟ್ ಮಾಡುವವರ ವಿರುದ್ಧ ಕಿಡಿಕಾರಿದ ಅವರು, “ನನ್ನ ಸಾಧನೆಯನ್ನು ನೋಡಿ ಕೆಲವರಿಗೆ ಹೊಟ್ಟೆ ಉರಿಯುತ್ತಿದೆ. ಆದರೆ ನಾನು ನನ್ನ ಪರಿಶ್ರಮದಿಂದ ಈ ಮಟ್ಟಕ್ಕೆ ಬಂದಿದ್ದೇನೆ. ಉರಿದುಕೊಂಡೇ ಇರಲಿ,” ಎಂದು ಖಡಕ್‌ ತಿರುಗೇಟು ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

11 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

11 hours ago