ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೊಮ್ಮೆ ಸುದ್ದಿ ಎಳೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ತಡೆಯಾಜ್ಞೆ ಉಲ್ಲಂಘಿಸಿ ಮತ್ತೊಂದು ವಿಡಿಯೋವನ್ನು ಪ್ರಕಟಿಸಿದ ಆರೋಪದ ಮೇಲೆ “ದೂತ” ಎಂಬ ಯೂಟ್ಯೂಬ್ ಚಾನೆಲ್ನ ಸಮೀರ್ ಎಂಡಿ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲೆಯಾಗಿದೆ.
ಈ ಮಾನನಷ್ಟ ಮೊಕದ್ದಮೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಅವರು ಸಲ್ಲಿಸಿದ್ದು, ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ನೀಡಲಾಗಿದೆ. ನ್ಯಾಯಾಧೀಶ ಎಸ್. ನಟರಾಜ್ ಅವರು ಸಮೀರ್ ಎಂಡಿಗೆ ನೋಟಿಸ್ ಜಾರಿ ಮಾಡಿ ನ್ಯಾಯಾಲಯದಲ್ಲಿ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ, ತಕ್ಷಣವೇ ವಿವಾದಿತ ಎರಡನೆ ವಿಡಿಯೋವನ್ನು ಡಿಲೀಟ್ ಮಾಡುವಂತೆ ಆದೇಶಿಸಿದ್ದಾರೆ.
ಈ ಹಿಂದೆ ಸೌಜನ್ಯಾ ಪ್ರಕರಣ ಸಂಬಂಧ ಧರ್ಮಸ್ಥಳ ಸಂಸ್ಥೆಯನ್ನು ನೇರವಾಗಿ ಗುರಿಯಾಗಿಸಿಕೊಂಡು ಸಮೀರ್ ಎಂಡಿ ಬಿಡುಗಡೆ ಮಾಡಿದ ಮೊದಲನೆಯ ವಿಡಿಯೋಕ್ಕೂ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಆದರೆ, ಆ ಆದೇಶವನ್ನು ಪರಿಗಣಿಸದೇ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿರುವುದು ನ್ಯಾಯಾಲಯದ ಆಕ್ರೋಶಕ್ಕೆ ಕಾರಣವಾಗಿದೆ.
ಧರ್ಮಸ್ಥಳದ ಪರವಾಗಿ ಕಾನೂನು ಹೋರಾಟಕ್ಕೆ ಇಳಿದಿರುವ ಅರ್ಜಿದಾರರು, ಇಂತಹ ವಿಡಿಯೋಗಳು ಧರ್ಮಸ್ಥಳ ಸಂಸ್ಥೆಯ ಮಾನಮರ್ಯಾದೆಗೆ ಹಾನಿ ತರುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆ 10 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದ್ದು, ಪ್ರಕರಣ ಇದೀಗ ಹೆಚ್ಚಿದ ಕುತೂಹಲದ ಕೇಂದ್ರಬಿಂದು ಆಗಿದೆ.
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…