Latest

ಸೌಜನ್ಯಾ ಪ್ರಕರಣದ ವಿಡಿಯೋ: ತಡೆಯಾಜ್ಞೆ ಉಲ್ಲಂಘನೆ ಹಿನ್ನೆಲೆ ಯೂಟ್ಯೂಬರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ”

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೊಮ್ಮೆ ಸುದ್ದಿ ಎಳೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ತಡೆಯಾಜ್ಞೆ ಉಲ್ಲಂಘಿಸಿ ಮತ್ತೊಂದು ವಿಡಿಯೋವನ್ನು ಪ್ರಕಟಿಸಿದ ಆರೋಪದ ಮೇಲೆ “ದೂತ” ಎಂಬ ಯೂಟ್ಯೂಬ್ ಚಾನೆಲ್‌ನ ಸಮೀರ್ ಎಂಡಿ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲೆಯಾಗಿದೆ.

ಈ ಮಾನನಷ್ಟ ಮೊಕದ್ದಮೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಅವರು ಸಲ್ಲಿಸಿದ್ದು, ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ನೀಡಲಾಗಿದೆ. ನ್ಯಾಯಾಧೀಶ ಎಸ್. ನಟರಾಜ್ ಅವರು ಸಮೀರ್ ಎಂಡಿಗೆ ನೋಟಿಸ್ ಜಾರಿ ಮಾಡಿ ನ್ಯಾಯಾಲಯದಲ್ಲಿ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ, ತಕ್ಷಣವೇ ವಿವಾದಿತ ಎರಡನೆ ವಿಡಿಯೋವನ್ನು ಡಿಲೀಟ್ ಮಾಡುವಂತೆ ಆದೇಶಿಸಿದ್ದಾರೆ.

ಈ ಹಿಂದೆ ಸೌಜನ್ಯಾ ಪ್ರಕರಣ ಸಂಬಂಧ ಧರ್ಮಸ್ಥಳ ಸಂಸ್ಥೆಯನ್ನು ನೇರವಾಗಿ ಗುರಿಯಾಗಿಸಿಕೊಂಡು ಸಮೀರ್ ಎಂಡಿ ಬಿಡುಗಡೆ ಮಾಡಿದ ಮೊದಲನೆಯ ವಿಡಿಯೋಕ್ಕೂ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಆದರೆ, ಆ ಆದೇಶವನ್ನು ಪರಿಗಣಿಸದೇ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿರುವುದು ನ್ಯಾಯಾಲಯದ ಆಕ್ರೋಶಕ್ಕೆ ಕಾರಣವಾಗಿದೆ.

ಧರ್ಮಸ್ಥಳದ ಪರವಾಗಿ ಕಾನೂನು ಹೋರಾಟಕ್ಕೆ ಇಳಿದಿರುವ ಅರ್ಜಿದಾರರು, ಇಂತಹ ವಿಡಿಯೋಗಳು ಧರ್ಮಸ್ಥಳ ಸಂಸ್ಥೆಯ ಮಾನಮರ್ಯಾದೆಗೆ ಹಾನಿ ತರುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆ 10 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದ್ದು, ಪ್ರಕರಣ ಇದೀಗ ಹೆಚ್ಚಿದ ಕುತೂಹಲದ ಕೇಂದ್ರಬಿಂದು ಆಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago