ಬಸವಕಲ್ಯಾಣ : ತಾಲೂಕಿನ ಘಾಟಹಿಪ್ಪರಗಾದಲ್ಲಿ ಸೋಯಾ ಬಣವಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಲಕ್ಷಾಂತರ ರೂ . ಮೌಲ್ಯದ ಸೋಯಾ ಹಾನಿಗೀಡಾಗಿದೆ . ಗ್ರಾಮದ ಸಂಜುಕುಮಾರ ಮಾಲಿ ಪಾಟೀಲ್ ಎನ್ನುವರ ಜಮೀನಿನಲ್ಲಿ ರಾಶಿ ಮಾಡಲು ಕಟಾವು ಮಾಡಿ ಇಟ್ಟಿದ್ದ ಬಣವಿಗೆ ಗುರುವಾರ ಮಧ್ಯ ರಾತ್ರಿ ವೇಳೆಯಲ್ಲಿ ಬೆಂಕಿ ಹೊತ್ತಿಕೊಂಡು ಸುಮಾರು 5 ಲಕ್ಷ ರೂ ಮೌಲ್ಯದ ಸೋಯಾ ಹಾನಿ ಆಗಿದೆ ಎಂದು ಅಂದಾಜಿಸಲಾಗಿದೆ . ಸುಮಾರು 9 ಎಕರೆಯಲ್ಲಿ ಬೆಳೆದ ಸೋಯಾ ರಾಶಿ ಮಾಡುವುದಕ್ಕಾಗಿ ಕಟಾವು ಮಾಡಿ ಇಡಲಾಗಿತ್ತು . ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ , ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅದಾಗಲೇ ಸೋಯಾ ಸುಟ್ಟಿತ್ತು . ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಸಲಗರ ಭೇಟಿ : ಘಟನೆ ಹಿನ್ನೆಲೆಯಲ್ಲಿ ಶಾಸಕ ಶರಣು ಸಲಗರ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು . ಹಾನಿಗೆ ಸರ್ಕಾರದಿಂದ ಸಾಧ್ಯವಿರುವ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು . ಘಾಟಹಿಪ್ಪರಗಾದಲ್ಲಿ ಸೋಯಾ ಬಣವಿಗೆಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ ಮೌಲ್ಯದ ಸೋಯಾ ಹಾನಿಗೀಡಾದ ಹಿನ್ನೆಲೆಯಲ್ಲಿ ಶಾಸಕ ಶರಣು ಸಲಗರ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು . ರೈತ ಸಂಜುಕುಮಾರ ಮಾಲಿಪಾಟೀಲ್ , ಪ್ರಮುಖರಾದ ಸುಧೀರ ಕಾಡಾದಿ , ಶಾಂತವಿಜಯ ಪಾಟೀಲ್ , ಮಹಾದೇವ ಪೂಜಾರಿ , ಷಣ್ಮುಖಯ್ಯ ಸ್ವಾಮಿ ಇತರರಿದ್ದರು .
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…