ಬಸವಕಲ್ಯಾಣ : ತಾಲೂಕಿನ ಘಾಟಹಿಪ್ಪರಗಾದಲ್ಲಿ ಸೋಯಾ ಬಣವಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಲಕ್ಷಾಂತರ ರೂ . ಮೌಲ್ಯದ ಸೋಯಾ ಹಾನಿಗೀಡಾಗಿದೆ . ಗ್ರಾಮದ ಸಂಜುಕುಮಾರ ಮಾಲಿ ಪಾಟೀಲ್ ಎನ್ನುವರ ಜಮೀನಿನಲ್ಲಿ ರಾಶಿ ಮಾಡಲು ಕಟಾವು ಮಾಡಿ ಇಟ್ಟಿದ್ದ ಬಣವಿಗೆ ಗುರುವಾರ ಮಧ್ಯ ರಾತ್ರಿ ವೇಳೆಯಲ್ಲಿ ಬೆಂಕಿ ಹೊತ್ತಿಕೊಂಡು ಸುಮಾರು 5 ಲಕ್ಷ ರೂ ಮೌಲ್ಯದ ಸೋಯಾ ಹಾನಿ ಆಗಿದೆ ಎಂದು ಅಂದಾಜಿಸಲಾಗಿದೆ . ಸುಮಾರು 9 ಎಕರೆಯಲ್ಲಿ ಬೆಳೆದ ಸೋಯಾ ರಾಶಿ ಮಾಡುವುದಕ್ಕಾಗಿ ಕಟಾವು ಮಾಡಿ ಇಡಲಾಗಿತ್ತು . ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ , ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅದಾಗಲೇ ಸೋಯಾ ಸುಟ್ಟಿತ್ತು . ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಸಲಗರ ಭೇಟಿ : ಘಟನೆ ಹಿನ್ನೆಲೆಯಲ್ಲಿ ಶಾಸಕ ಶರಣು ಸಲಗರ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು . ಹಾನಿಗೆ ಸರ್ಕಾರದಿಂದ ಸಾಧ್ಯವಿರುವ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು . ಘಾಟಹಿಪ್ಪರಗಾದಲ್ಲಿ ಸೋಯಾ ಬಣವಿಗೆಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ ಮೌಲ್ಯದ ಸೋಯಾ ಹಾನಿಗೀಡಾದ ಹಿನ್ನೆಲೆಯಲ್ಲಿ ಶಾಸಕ ಶರಣು ಸಲಗರ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು . ರೈತ ಸಂಜುಕುಮಾರ ಮಾಲಿಪಾಟೀಲ್ , ಪ್ರಮುಖರಾದ ಸುಧೀರ ಕಾಡಾದಿ , ಶಾಂತವಿಜಯ ಪಾಟೀಲ್ , ಮಹಾದೇವ ಪೂಜಾರಿ , ಷಣ್ಮುಖಯ್ಯ ಸ್ವಾಮಿ ಇತರರಿದ್ದರು .
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…