ಬಸವಕಲ್ಯಾಣ : ತಾಲೂಕಿನ ಘಾಟಹಿಪ್ಪರಗಾದಲ್ಲಿ ಸೋಯಾ ಬಣವಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಲಕ್ಷಾಂತರ ರೂ . ಮೌಲ್ಯದ ಸೋಯಾ ಹಾನಿಗೀಡಾಗಿದೆ . ಗ್ರಾಮದ ಸಂಜುಕುಮಾರ ಮಾಲಿ ಪಾಟೀಲ್ ಎನ್ನುವರ ಜಮೀನಿನಲ್ಲಿ ರಾಶಿ ಮಾಡಲು ಕಟಾವು ಮಾಡಿ ಇಟ್ಟಿದ್ದ ಬಣವಿಗೆ ಗುರುವಾರ ಮಧ್ಯ ರಾತ್ರಿ ವೇಳೆಯಲ್ಲಿ ಬೆಂಕಿ ಹೊತ್ತಿಕೊಂಡು ಸುಮಾರು 5 ಲಕ್ಷ ರೂ ಮೌಲ್ಯದ ಸೋಯಾ ಹಾನಿ ಆಗಿದೆ ಎಂದು ಅಂದಾಜಿಸಲಾಗಿದೆ . ಸುಮಾರು 9 ಎಕರೆಯಲ್ಲಿ ಬೆಳೆದ ಸೋಯಾ ರಾಶಿ ಮಾಡುವುದಕ್ಕಾಗಿ ಕಟಾವು ಮಾಡಿ ಇಡಲಾಗಿತ್ತು . ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ , ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅದಾಗಲೇ ಸೋಯಾ ಸುಟ್ಟಿತ್ತು . ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಸಲಗರ ಭೇಟಿ : ಘಟನೆ ಹಿನ್ನೆಲೆಯಲ್ಲಿ ಶಾಸಕ ಶರಣು ಸಲಗರ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು . ಹಾನಿಗೆ ಸರ್ಕಾರದಿಂದ ಸಾಧ್ಯವಿರುವ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು . ಘಾಟಹಿಪ್ಪರಗಾದಲ್ಲಿ ಸೋಯಾ ಬಣವಿಗೆಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ ಮೌಲ್ಯದ ಸೋಯಾ ಹಾನಿಗೀಡಾದ ಹಿನ್ನೆಲೆಯಲ್ಲಿ ಶಾಸಕ ಶರಣು ಸಲಗರ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು . ರೈತ ಸಂಜುಕುಮಾರ ಮಾಲಿಪಾಟೀಲ್ , ಪ್ರಮುಖರಾದ ಸುಧೀರ ಕಾಡಾದಿ , ಶಾಂತವಿಜಯ ಪಾಟೀಲ್ , ಮಹಾದೇವ ಪೂಜಾರಿ , ಷಣ್ಮುಖಯ್ಯ ಸ್ವಾಮಿ ಇತರರಿದ್ದರು .
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…