Categories: CrimeLatest

ಗೌರಿಬಿದನೂರು ಬಿ.ಎಚ್. ರಸ್ತೆಯಲ್ಲಿ ಮತ್ತೆ ಸರಣಿ ಕಳ್ಳತನ: ವ್ಯಾಪಾರಿಗಳಲ್ಲಿ ಭೀತಿ, ಪೊಲೀಸರ ವಿರುದ್ಧ ನಿರ್ಲಕ್ಷ್ಯದ ಆರೋಪ

ಗೌರಿಬಿದನೂರು: ನಗರದ ಹೃದಯಭಾಗವಾದ ಬಿ.ಎಚ್. ರಸ್ತೆಯಲ್ಲಿ ಮತ್ತೊಮ್ಮೆ ಸರಣಿ ಕಳ್ಳತನ ನಡೆದಿದ್ದು, ವ್ಯಾಪಾರಿಗಳಲ್ಲಿ ಆತಂಕ ಮನೆ ಮಾಡಿದೆ. ನ್ಯಾಷನಲ್ ಕಾಲೇಜು ಸಮೀಪದ ಹಜರತ್ ಜಲಾಲ್ ಶಾ ಕಾಂಪ್ಲೆಕ್ಸ್‌ನಲ್ಲಿರುವ ಮೂರು ಅಂಗಡಿಗಳ ಬೀಗ ಮುರಿದು ದುಷ್ಕರ್ಮಿಗಳು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಕಳ್ಳರು ಕಾಂಪ್ಲೆಕ್ಸ್‌ನಲ್ಲಿದ್ದ ದಿನಸಿ ಅಂಗಡಿ ಸೇರಿದಂತೆ ಮೂರು ಅಂಗಡಿಗಳ ಶಟರ್‌ಗಳನ್ನು ಎತ್ತಿ ಒಳನುಗ್ಗಿದ್ದು, ದಿನಸಿ ಅಂಗಡಿಯ ಕ್ಯಾಶ್ ಬಾಕ್ಸ್‌ನಲ್ಲಿದ್ದ ಸುಮಾರು ₹6,000 ನಗದು ಹಾಗೂ ಮಿಕ್ಸ್ಚರ್ ಪ್ಯಾಕೆಟ್‌ಗಳು, ಮೈದಾ ಹಿಟ್ಟಿನ ಪ್ಯಾಕೆಟ್‌ಗಳು ಸೇರಿದಂತೆ ಕೆಲವು ವ್ಯಾಪಾರ ಸಾಮಗ್ರಿಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಳಿಗ್ಗೆ ಅಂಗಡಿ ತೆರೆಯಲು ಬಂದ ಮಾಲೀಕರು ಕಳ್ಳತನ ನಡೆದಿರುವುದನ್ನು ಗಮನಿಸಿ ತಕ್ಷಣವೇ ಗೌರಿಬಿದನೂರು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಕುರಿತು ಮಾತನಾಡಿದ ಅಂಗಡಿ ಮಾಲೀಕರು, “ಇದೇ ರೀತಿಯ ಕಳ್ಳತನ ಮೂರು ತಿಂಗಳ ಹಿಂದೆಯೂ ನಡೆದಿತ್ತು. ಆಗಲೂ ಪೊಲೀಸರಿಗೆ ದೂರು ನೀಡಿದ್ದೆವು. ಆದರೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಿಲ್ಲ. ಈಗ ಮತ್ತೆ ಅದೇ ರೀತಿಯ ಕಳ್ಳತನ ನಡೆದಿದೆ. ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿರುವುದರಿಂದ ವ್ಯಾಪಾರ ನಡೆಸುವುದೇ ಭಯದ ವಾತಾವರಣದಲ್ಲಿ ನಡೆಯುತ್ತಿದೆ. ಕಳ್ಳರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.

ಇನ್ನೊಬ್ಬ ವ್ಯಾಪಾರಿ ಅಮೀರ್ ಸುಹೇಲ್ ಮಾತನಾಡಿ, “ನಮ್ಮ ಅಂಗಡಿಯ ಪಕ್ಕದಲ್ಲೇ ಮತ್ತೆ ಕಳ್ಳತನವಾಗಿದೆ. ಇದೇ ಪ್ರದೇಶದಲ್ಲಿ ಈ ಹಿಂದೆ ಕೂಡ ಇಂತಹ ಘಟನೆ ನಡೆದಿತ್ತು. ದೂರು ನೀಡಿದಾಗ ಪೊಲೀಸರು ಬಂದು ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿ ಹೋಗುತ್ತಾರೆ. ಆದರೆ ಕ್ಯಾಮೆರಾ ಇರುವ ಪ್ರದೇಶಗಳಲ್ಲಿಯೂ ಕಳ್ಳತನಗಳು ನಡೆಯುತ್ತಿವೆ. ರಾತ್ರಿ ವೇಳೆ ಪೊಲೀಸ್ ಬೀಟ್ ಹೆಚ್ಚಿಸಿ, ಕಳ್ಳತನಗಳನ್ನು ತಡೆಗಟ್ಟಲು ಶಾಶ್ವತ ಕ್ರಮ ಕೈಗೊಳ್ಳಬೇಕು,” ಎಂದು ಒತ್ತಾಯಿಸಿದರು.

ಬಿ.ಎಚ್. ರಸ್ತೆ ಗೌರಿಬಿದನೂರಿನ ಅತ್ಯಂತ ಜನನಿಬಿಡ ಮತ್ತು ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಒಂದಾಗಿದ್ದು, ಇಂತಹ ಪ್ರದೇಶದಲ್ಲೇ ಪದೇ ಪದೇ ಕಳ್ಳತನಗಳು ನಡೆಯುತ್ತಿರುವುದು ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಆತಂಕಕ್ಕೆ ಕಾರಣವಾಗಿದೆ. ವ್ಯಾಪಾರಿಗಳು ಸಂಜೆ ಅಂಗಡಿ ಮುಚ್ಚಿ ಮನೆಗೆ ತೆರಳುವುದಕ್ಕೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಸ್ಥಳೀಯ ವ್ಯಾಪಾರಿಗಳು ನಗರದಲ್ಲಿ ರಾತ್ರಿ ಪೊಲೀಸ್ ಗಸ್ತು ಹೆಚ್ಚಿಸುವುದು, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ವಹಿಸುವುದು ಹಾಗೂ ಸರಣಿ ಕಳ್ಳತನಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

18 hours ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

18 hours ago

₹5 ಲಕ್ಷ ಸಾಲ ವಾಪಸ್ ಕೇಳಿದ್ದಕ್ಕೆ ರೇಪ್ ಕೇಸ್ ಬೆದರಿಕೆ? ಮಾನಸಿಕ ಕಿರುಕುಳಕ್ಕೆ ನೊಂದು ಯುವಕ ಆತ್ಮಹತ್ಯೆ; ಕುಟುಂಬದ ಗಂಭೀರ ಆರೋಪ

ಮಂಡ್ಯ: ಸಾಲವಾಗಿ ನೀಡಿದ್ದ ಹಣವನ್ನು ಮರಳಿ ಕೇಳಿದ್ದಕ್ಕೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ವಿವಾಹಿತೆಯ ಮಾನಸಿಕ ಕಿರುಕುಳದಿಂದ…

18 hours ago

ಹುಟ್ಟುಹಬ್ಬದ ಸಂಭ್ರಮ ದುರಂತದಲ್ಲಿ ಅಂತ್ಯ: ನೆಲಮಂಗಲದಲ್ಲಿ ಕಾರು ಪಲ್ಟಿ, ಇಬ್ಬರು ಸಾವು..!

ಬೆಂಗಳೂರು ಗ್ರಾಮಾಂತರ: ಹುಟ್ಟುಹಬ್ಬದ ಸಂಭ್ರಮ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸ್ನೇಹಿತರ ತಂಡ ಭೀಕರ ರಸ್ತೆ ಅಪಘಾತಕ್ಕೆ ಗುರಿಯಾಗಿದ್ದು, ಇಬ್ಬರು…

18 hours ago

ರೋಡ್ ರೇಜ್ ವಿವಾದದ ಬಳಿಕ ಮಾಲೂರು ನ್ಯಾಯಾಧೀಶೆ ಗಾಯತ್ರಿಗೆ ಬೀದರ್ ವರ್ಗಾವಣೆ; ಹೈಕೋರ್ಟ್ ಆಡಳಿತಾತ್ಮಕ ಕ್ರಮ

ಬೆಂಗಳೂರು: ಸಾರ್ವಜನಿಕರೊಂದಿಗೆ ರಸ್ತೆ ಮಧ್ಯೆ ಮಾತಿನ ಚಕಮಕಿ ನಡೆಸಿ ಅಧಿಕಾರ ದುರ್ಬಳಕೆ ಆರೋಪಕ್ಕೆ ಗುರಿಯಾಗಿದ್ದ ಹಾಗೂ ಹೈಕೋರ್ಟ್‌ನಿಂದ ತೀವ್ರ ತರಾಟೆಗೆ…

18 hours ago

ರಾಪಿಡೋ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿಯ ಬದುಕೇ ಚಿಂದಿ: 20 ಲಕ್ಷ ಚಿಕಿತ್ಸಾ ವೆಚ್ಚ, ನ್ಯಾಯಕ್ಕಾಗಿ ಕಣ್ಣೀರಿನ ಹೋರಾಟ!

ಬೆಂಗಳೂರು: ಆನ್‌ಲೈನ್ ಬೈಕ್ ಟ್ಯಾಕ್ಸಿ ಸೇವೆಗಳ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಮೂಡುವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಪಿಡೋ ಬೈಕ್…

18 hours ago