ಗಡಿಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಗುಂಪುಗಳ ಹಾವಳಿ ಹೆಚ್ಚುತ್ತಿದ್ದು, ಸರಕಾರಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆಯ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ವಿವಾದ ಚಿಗುರುತ್ತಿದೆ. ಈಗ ಮರಾಠಿ ಪುಂಡರು ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡುತ್ತಿದೆ.
ಕನ್ನಡ ಮಾತನಾಡಲು ನಿರಾಕರಣೆ – ಪಿಡಿಓಗೆ ಅವಾಚ್ಯ ನಿಂದನೆ
ಕಿಣೆಯ ಗ್ರಾಮ ಪಂಚಾಯತ್ ಪಿಡಿಓ ನಾಗೇಂದ್ರ ಪತ್ತಾರರಿಗೆ, ಕನ್ನಡ ಮಾತನಾಡದಂತೆ ಒತ್ತಾಯಿಸಿ, ಮರಾಠಿ ಭಾಷೆಯಲ್ಲಿ ಮಾತು ಆಡಲು ಒತ್ತಡ ಹೇರಲಾಗಿದೆ. ಈ ವೇಳೆ ತಿಪ್ಪಣ್ಣ ಸುಭಾಷ ಡೊಕ್ರೆ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ವರದಿಯಾಗಿದೆ.
ಆತಂಕದಲ್ಲಿ ಅಧಿಕಾರಿ ವರ್ಗ – ಭದ್ರತಾ ಬೇಡಿಕೆ
ಮರಾಠಿ ಭಾಷಿಕ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ವರ್ಗ ದೈನಂದಿನ ಭಯದ ವಾತಾವರಣದಲ್ಲೇ ಕರ್ತವ್ಯ ನಿರ್ವಹಿಸುತ್ತಿದೆ. ಈ ಘಟನೆಯ ಬೆನ್ನಲ್ಲೇ ಕಿಣೆಯ ಗ್ರಾಮ ಪಂಚಾಯತ್ ಪಿಡಿಓ ಪೊಲೀಸರ ಭದ್ರತೆ ಒದಗಿಸಲು ಆಗ್ರಹಿಸಿದ್ದಾರೆ.
ಈ ಕೃತ್ಯ ಪ್ರಶ್ನೆಗಳ ಸುಳಿಯಲ್ಲಿ ಸಿಕ್ಕಿದ್ದು, ಕನ್ನಡಿಗರಿಗೆ ವಿರುದ್ಧವಾಗಿ ನಡೆಯುತ್ತಿರುವ ಈ ರೀತಿಯ ಕೃತ್ಯಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…