ಗಡಿಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಗುಂಪುಗಳ ಹಾವಳಿ ಹೆಚ್ಚುತ್ತಿದ್ದು, ಸರಕಾರಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆಯ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ವಿವಾದ ಚಿಗುರುತ್ತಿದೆ. ಈಗ ಮರಾಠಿ ಪುಂಡರು ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡುತ್ತಿದೆ.
ಕನ್ನಡ ಮಾತನಾಡಲು ನಿರಾಕರಣೆ – ಪಿಡಿಓಗೆ ಅವಾಚ್ಯ ನಿಂದನೆ
ಕಿಣೆಯ ಗ್ರಾಮ ಪಂಚಾಯತ್ ಪಿಡಿಓ ನಾಗೇಂದ್ರ ಪತ್ತಾರರಿಗೆ, ಕನ್ನಡ ಮಾತನಾಡದಂತೆ ಒತ್ತಾಯಿಸಿ, ಮರಾಠಿ ಭಾಷೆಯಲ್ಲಿ ಮಾತು ಆಡಲು ಒತ್ತಡ ಹೇರಲಾಗಿದೆ. ಈ ವೇಳೆ ತಿಪ್ಪಣ್ಣ ಸುಭಾಷ ಡೊಕ್ರೆ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ವರದಿಯಾಗಿದೆ.
ಆತಂಕದಲ್ಲಿ ಅಧಿಕಾರಿ ವರ್ಗ – ಭದ್ರತಾ ಬೇಡಿಕೆ
ಮರಾಠಿ ಭಾಷಿಕ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ವರ್ಗ ದೈನಂದಿನ ಭಯದ ವಾತಾವರಣದಲ್ಲೇ ಕರ್ತವ್ಯ ನಿರ್ವಹಿಸುತ್ತಿದೆ. ಈ ಘಟನೆಯ ಬೆನ್ನಲ್ಲೇ ಕಿಣೆಯ ಗ್ರಾಮ ಪಂಚಾಯತ್ ಪಿಡಿಓ ಪೊಲೀಸರ ಭದ್ರತೆ ಒದಗಿಸಲು ಆಗ್ರಹಿಸಿದ್ದಾರೆ.
ಈ ಕೃತ್ಯ ಪ್ರಶ್ನೆಗಳ ಸುಳಿಯಲ್ಲಿ ಸಿಕ್ಕಿದ್ದು, ಕನ್ನಡಿಗರಿಗೆ ವಿರುದ್ಧವಾಗಿ ನಡೆಯುತ್ತಿರುವ ಈ ರೀತಿಯ ಕೃತ್ಯಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…