Latest

ಬಂಗಾರಪೇಟೆ ತಾಲೂಕಿನ ಗಡಿಭಾಗದ ಕಾಮಸಮುದ್ರ ಪೊಲೀಸರಿಂದ ವಿಶೇಷ ಕಾರ್ಯಾಚರಣೆ: ಅಂತರಾಜ್ಯದ ನಾಲ್ವರು ಕಳ್ಳರ ಬಂಧನ.

ಬಂಗಾರಪೇಟೆ : ತಾಲೂಕಿನ ದೊಡ್ಡಪನ್ನಾಂಡಹಳ್ಳಿ ಗ್ರಾಮದಲ್ಲಿ ನಡೆದಿದ್ದ 2 ಸೀಮೆ ಹಸು ಮತ್ತು 4 ಕುರಿ ಕಳ್ಳತನ ಪ್ರಕರಣದ ಆರೋಪಿಗಳು ಮತ್ತು ಮಾಲನ್ನು ಪತ್ತೆ ಮಾಡಲು ಡಿ.ವೈ.ಎಸ್‌.ಪಿ ಎಸ್. ಪಾಂಡುರಂಗ ಹಾಗೂ ಕಾಮಸಮುದ್ರ ಸಿ.ಪಿ.ಐ ಜಿ.ಸಿ.ನಾರಾಯಣಸ್ವಾಮಿ ಮಾರ್ಗದರ್ಶನದಲ್ಲಿ ಕಾಮಸಮುದ್ರ ಪಿ.ಎಸ್‌.ಐ ಬಿ.ವಿ.ಕಿರಣ್‌ ಕುಮಾ‌ರ್ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಲಾಗಿತ್ತು.

ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಠಾಣೆಯ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದ 5 ಕಳವು ಪ್ರಕರಣಗಳಲ್ಲಿ ಅಂತರ್ ರಾಜ್ಯದ ನಾಲ್ವರು ರಾತ್ರಿ ವೇಳೆ ಬೊಲೆರೊ ವಾಹನದಲ್ಲಿ ಬಂದು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಟ್ರ್ಯಾಕ್ಟರ್, ಹಸು, ಕುರಿ, ಹಂದಿಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ವಾಸಿ ಸುರೇಶ್, ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ವಾಸಿ ಸತೀಶ್, ರೂಪೇಶ್, ವೆಂಕಟರಮಣಪ್ಪ ಎಂಬುವರನ್ನು ಬಂಧಿಸಿ, ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ ಒಟ್ಟು 5 ಕಳವು ಪ್ರಕರಣಗಳಲ್ಲಿ ಕಳ್ಳತನ ಮಾಡಲಾಗಿದ್ದ ರೂ.13,73,200/-ಮೌಲ್ಯದ 1 ಟ್ರಾಕ್ಟರ್‌ ಮತ್ತು ಟ್ರಾಲಿ, 3 ಹಸು, 4 ಕುರಿ, 32 ಹಂದಿಗಳು ಹಾಗು ರೂ.3200/- ನಗದನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಕಾಮಸಮುದ್ರ ಪಿ.ಎಸ್‌.ಐ ಬಿ.ವಿ.ಕಿರಣ್ ಕುಮಾರ್, ವಿಶೇಷ ಅಪರಾಧ ಪತ್ತೆ ತಂಡದ ಸಿಬ್ಬಂದಿ ಮುನಾವ‌ರ್ ಪಾಷಾ, ಮಂಜುನಾಥರೆಡ್ಡಿ, ರಾಮಕೃಷ್ಣಾರೆಡ್ಡಿ, ರಾಮ ರಾವ್, ಮಂಜುನಾಥ, ಮಾರ್ಕೊಂಡ , ಲಕ್ಷ್ಮಣ ತೇಲಿ, ಹಾಗೂ ಜೀಪ್ ಚಾಲಕ ಗುರುಮೂರ್ತಿ ಅವರ ಉತ್ತಮ ಕೆಲಸವನ್ನು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಶ್ಲಾಘಿಸಿದ್ದಾರೆ. ವರದಿ ರೋಶನ್ ಜಮೀರ್

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

4 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

4 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

4 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

4 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

5 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago