Latest

ಬಂಗಾರಪೇಟೆ ತಾಲೂಕಿನ ಗಡಿಭಾಗದ ಕಾಮಸಮುದ್ರ ಪೊಲೀಸರಿಂದ ವಿಶೇಷ ಕಾರ್ಯಾಚರಣೆ: ಅಂತರಾಜ್ಯದ ನಾಲ್ವರು ಕಳ್ಳರ ಬಂಧನ.

ಬಂಗಾರಪೇಟೆ : ತಾಲೂಕಿನ ದೊಡ್ಡಪನ್ನಾಂಡಹಳ್ಳಿ ಗ್ರಾಮದಲ್ಲಿ ನಡೆದಿದ್ದ 2 ಸೀಮೆ ಹಸು ಮತ್ತು 4 ಕುರಿ ಕಳ್ಳತನ ಪ್ರಕರಣದ ಆರೋಪಿಗಳು ಮತ್ತು ಮಾಲನ್ನು ಪತ್ತೆ ಮಾಡಲು ಡಿ.ವೈ.ಎಸ್‌.ಪಿ ಎಸ್. ಪಾಂಡುರಂಗ ಹಾಗೂ ಕಾಮಸಮುದ್ರ ಸಿ.ಪಿ.ಐ ಜಿ.ಸಿ.ನಾರಾಯಣಸ್ವಾಮಿ ಮಾರ್ಗದರ್ಶನದಲ್ಲಿ ಕಾಮಸಮುದ್ರ ಪಿ.ಎಸ್‌.ಐ ಬಿ.ವಿ.ಕಿರಣ್‌ ಕುಮಾ‌ರ್ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಲಾಗಿತ್ತು.

ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಠಾಣೆಯ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದ 5 ಕಳವು ಪ್ರಕರಣಗಳಲ್ಲಿ ಅಂತರ್ ರಾಜ್ಯದ ನಾಲ್ವರು ರಾತ್ರಿ ವೇಳೆ ಬೊಲೆರೊ ವಾಹನದಲ್ಲಿ ಬಂದು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಟ್ರ್ಯಾಕ್ಟರ್, ಹಸು, ಕುರಿ, ಹಂದಿಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ವಾಸಿ ಸುರೇಶ್, ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ವಾಸಿ ಸತೀಶ್, ರೂಪೇಶ್, ವೆಂಕಟರಮಣಪ್ಪ ಎಂಬುವರನ್ನು ಬಂಧಿಸಿ, ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ ಒಟ್ಟು 5 ಕಳವು ಪ್ರಕರಣಗಳಲ್ಲಿ ಕಳ್ಳತನ ಮಾಡಲಾಗಿದ್ದ ರೂ.13,73,200/-ಮೌಲ್ಯದ 1 ಟ್ರಾಕ್ಟರ್‌ ಮತ್ತು ಟ್ರಾಲಿ, 3 ಹಸು, 4 ಕುರಿ, 32 ಹಂದಿಗಳು ಹಾಗು ರೂ.3200/- ನಗದನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಕಾಮಸಮುದ್ರ ಪಿ.ಎಸ್‌.ಐ ಬಿ.ವಿ.ಕಿರಣ್ ಕುಮಾರ್, ವಿಶೇಷ ಅಪರಾಧ ಪತ್ತೆ ತಂಡದ ಸಿಬ್ಬಂದಿ ಮುನಾವ‌ರ್ ಪಾಷಾ, ಮಂಜುನಾಥರೆಡ್ಡಿ, ರಾಮಕೃಷ್ಣಾರೆಡ್ಡಿ, ರಾಮ ರಾವ್, ಮಂಜುನಾಥ, ಮಾರ್ಕೊಂಡ , ಲಕ್ಷ್ಮಣ ತೇಲಿ, ಹಾಗೂ ಜೀಪ್ ಚಾಲಕ ಗುರುಮೂರ್ತಿ ಅವರ ಉತ್ತಮ ಕೆಲಸವನ್ನು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಶ್ಲಾಘಿಸಿದ್ದಾರೆ. ವರದಿ ರೋಶನ್ ಜಮೀರ್

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

5 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

6 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

6 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

6 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

6 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

6 hours ago