Latest

ಗೂಢಚಾರಿಕೆ ಆರೋಪ: ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆಗೆ ಯುವಕನ ಬಂಧನ.

ಅಹ್ಮದಾಬಾದ್‌: ರಾಷ್ಟ್ರದ ಭದ್ರತೆಗೆ ಧಕ್ಕೆ ತರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಗುಜರಾತ್‌ನ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಹದೇವ್‌ ಸಿಂಗ್‌ ಗೋಹ್ಲಿ ಎಂದು ಗುರುತಿಸಲಾದ ಆರೋಪಿ, ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ಒದಗಿಸುತ್ತಿದ್ದಾನೆ ಎಂಬ ಶಂಕೆಯ ಮೇರೆಗೆ ವಶಕ್ಕೆ ಪಡೆಯಲಾಗಿದೆ.

ಆರೋಪಗಳ ಪ್ರಕಾರ, ಗೋಹ್ಲಿ ಭಾರತ ವಾಯು ಸೇನೆ ಮತ್ತು ಗಡಿ ಭದ್ರತಾ ಪಡೆಗಳ (BSF) ಕುರಿತಂತೆ ಅತ್ಯಂತ ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್ತಾನದೊಂದಿಗೆ ಹಂಚಿಕೊಂಡಿದ್ದ ಎನ್ನಲಾಗಿದೆ. ಗೂಢಚಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಈತನ ಮೇಲೆ ರಾಷ್ಟ್ರೀಯ ಭದ್ರತಾ ಸಂಬಂಧಿತ ಕಾನೂನು ಉಲ್ಲಂಘನೆ ಆರೋಪಿಸಲಾಗಿದೆ.

ಕಛ್ ಜಿಲ್ಲೆಯ ನಿವಾಸಿಯಾಗಿರುವ ಸಹದೇವ್‌ ಸಿಂಗ್‌ ಸ್ಥಳೀಯ ಆಸ್ಪತ್ರೆಗೆ ಆರೋಗ್ಯ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ. ತನ್ನ ಉದ್ಯೋಗದ ಅವಕಾಸವನ್ನು ದುರುಪಯೋಗಪಡಿಸಿಕೊಂಡು, ಸೇನೆಯ ಚಲನವಲನ ಹಾಗೂ ಭದ್ರತಾ ಮಾಹಿತಿಗಳನ್ನು ಸೋರಿಸುತ್ತಿದ್ದಾನೆ ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ಆರೋಪಿ ವಿಚಾರಣೆಯಲ್ಲಿದ್ದಾನೆ. ಗುಜರಾತ್ ಉಗ್ರ ನಿಗ್ರಹ ದಳದ (ATS) ಅಧಿಕಾರಿ ಕೆ. ಸಿದ್ದಾರ್ಥ್‌ ಈ ಕುರಿತು ಸ್ಪಷ್ಟನೆ ನೀಡಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

19 minutes ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

20 minutes ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

11 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

11 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

11 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

11 hours ago