Categories: Latest

ಕುಡುಕನ ನಾಟಕದಿಂದ ಶೃಂಗೇರಿ ಪೊಲೀಸರ ಪರದಾಟ!

ಶೃಂಗೇರಿಯಲ್ಲಿ ಕುಡಿದ ಮತ್ತಿನಲ್ಲಿ ಒಬ್ಬ ವ್ಯಕ್ತಿ ಪೊಲೀಸರನ್ನೂ, ಆಂಬುಲೆನ್ಸ್ ಸಿಬ್ಬಂದಿಯನ್ನೂ ಕಂಗಾಲು ಗೊಳಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಗುಂಪು ಘರ್ಷಣೆಯ ಸುಳ್ಳು ಕರೆ ನೀಡಿ ರಾತ್ರಿಯಿಡೀ ಪೊಲೀಸ್ ಸಿಬ್ಬಂದಿ ಹಾಗೂ ವೈದ್ಯಕೀಯ ತಂಡವನ್ನು ಹರಿಯಾಡಿಸಿದ ಈ ವ್ಯಕ್ತಿ ಕೊನೆಗೆ ಪೊಲೀಸರ ಬುದ್ಧಿವಾದಕ್ಕೆ ಗುರಿಯಾಗಿದ್ದಾನೆ.

ಸುಳ್ಳು ಕರೆಗಳಿಂದ ಪೊಲೀಸರು ಪರದಾಟ

ಹಗರಿಬೊಮ್ಮನಹಳ್ಳಿಯಿಂದ ಕೂಲಿ ಕೆಲಸಕ್ಕಾಗಿ ಶೃಂಗೇರಿಗೆ ಬಂದಿದ್ದ ಬಸವರಾಜ್ ಎಂಬ ಮದ್ಯವ್ಯಸನಿ, ರಾತ್ರಿಯಲ್ಲಿ ಪೊಲೀಸರಿಗೆ ಕರೆ ಮಾಡಿ, “ಶೃಂಗೇರಿ ಬಸ್ ನಿಲ್ದಾಣದಲ್ಲಿ ಭಾರೀ ಗುಂಪು ಘರ್ಷಣೆ ನಡೆದಿದೆ” ಎಂದು ತುರ್ತು ಮಾಹಿತಿ ನೀಡಿದ. ಇದನ್ನೇ ನಂಬಿದ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿದರು.

ಇದೇ ಸಮಯದಲ್ಲಿ ಆಂಬುಲೆನ್ಸ್ ಸಿಬ್ಬಂದಿಗೂ ಬಸವರಾಜ್ ಕರೆ ಮಾಡಿ, “ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದಾರೆ, ತಕ್ಷಣವೇ ಬಂದು ಆಸ್ಪತ್ರೆಗೆ ಕರೆದೊಯ್ಯಿ” ಎಂದು ಸುಳ್ಳು ಮಾಹಿತಿ ನೀಡಿದ. ಇದರ ಪರಿಣಾಮವಾಗಿ ಆಂಬುಲೆನ್ಸ್ ಸಿಬ್ಬಂದಿಯೂ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದರು. ಆದರೆ ಅಲ್ಲಿದ್ದದ್ದು ಬಿಕೋ ಎದೆಯಾದ ಬಸ್ ನಿಲ್ದಾಣ ಮಾತ್ರ!

“ನನ್ನನ್ನು ಹುಡುಕಿ!” – ಕುಡುಕನ ಸವಾಲ್

ಘಟನೆ ಬಗ್ಗೆ ಪೊಲೀಸರು ಮತ್ತೆ ಮತ್ತೆ ಬಸವರಾಜ್‌ಗೆ ಕರೆ ಮಾಡಿದರು. ಅದಕ್ಕೆ ಪ್ರತಿಯಾಗಿ ಕುಡುಕನು “ಭೂಮಿ ಮೇಲೆ, ಆಕಾಶದ ಕೆಳಗಿದ್ದೇನೆ! ಹಿಮ್ಮತ್ತಿದ್ದರೆ ನನ್ನನ್ನು ಹುಡುಕಿ!” ಎಂದು ತಿರುಗೇಟು ನೀಡಿದ. ಈ ಮಾತು ಕೇಳಿ ಪೊಲೀಸರ ಕೋಪ ಹೆಚ್ಚಾಗಿತ್ತು.

ಕೊನೆಗೂ ಕುಡುಕ ಪತ್ತೆ!

ಬಹುಶ್ರಮಪಟ್ಟು ಹುಡುಕಾಟ ನಡೆಸಿದ ಪೊಲೀಸರು ಕೊನೆಗೂ ಕುಡುಕ ಬಸವರಾಜ್‌ನನ್ನು ಪತ್ತೆಹಚ್ಚಿ, ಅವನಿಗೆ ಬುದ್ಧಿವಾದ ಹೇಳಿ ಬಿಡುಗಡೆ ಮಾಡಿದರು. ಆದರೆ ಈ ಅವಾಂತರದಿಂದ ಶೃಂಗೇರಿ ಪೊಲೀಸರಿಗೆ ಹಾಗೂ ಆಂಬುಲೆನ್ಸ್ ಸಿಬ್ಬಂದಿಗೆ ರಾತ್ರಿಯಿಡೀ ಪರದಾಟ ನಿಜವಾಗಿಯೂ ದೊಡ್ಡ ತಲೆನೋವಾಯಿತು!

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago