Categories: Latest

ಕುಡುಕನ ನಾಟಕದಿಂದ ಶೃಂಗೇರಿ ಪೊಲೀಸರ ಪರದಾಟ!

ಶೃಂಗೇರಿಯಲ್ಲಿ ಕುಡಿದ ಮತ್ತಿನಲ್ಲಿ ಒಬ್ಬ ವ್ಯಕ್ತಿ ಪೊಲೀಸರನ್ನೂ, ಆಂಬುಲೆನ್ಸ್ ಸಿಬ್ಬಂದಿಯನ್ನೂ ಕಂಗಾಲು ಗೊಳಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಗುಂಪು ಘರ್ಷಣೆಯ ಸುಳ್ಳು ಕರೆ ನೀಡಿ ರಾತ್ರಿಯಿಡೀ ಪೊಲೀಸ್ ಸಿಬ್ಬಂದಿ ಹಾಗೂ ವೈದ್ಯಕೀಯ ತಂಡವನ್ನು ಹರಿಯಾಡಿಸಿದ ಈ ವ್ಯಕ್ತಿ ಕೊನೆಗೆ ಪೊಲೀಸರ ಬುದ್ಧಿವಾದಕ್ಕೆ ಗುರಿಯಾಗಿದ್ದಾನೆ.

ಸುಳ್ಳು ಕರೆಗಳಿಂದ ಪೊಲೀಸರು ಪರದಾಟ

ಹಗರಿಬೊಮ್ಮನಹಳ್ಳಿಯಿಂದ ಕೂಲಿ ಕೆಲಸಕ್ಕಾಗಿ ಶೃಂಗೇರಿಗೆ ಬಂದಿದ್ದ ಬಸವರಾಜ್ ಎಂಬ ಮದ್ಯವ್ಯಸನಿ, ರಾತ್ರಿಯಲ್ಲಿ ಪೊಲೀಸರಿಗೆ ಕರೆ ಮಾಡಿ, “ಶೃಂಗೇರಿ ಬಸ್ ನಿಲ್ದಾಣದಲ್ಲಿ ಭಾರೀ ಗುಂಪು ಘರ್ಷಣೆ ನಡೆದಿದೆ” ಎಂದು ತುರ್ತು ಮಾಹಿತಿ ನೀಡಿದ. ಇದನ್ನೇ ನಂಬಿದ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿದರು.

ಇದೇ ಸಮಯದಲ್ಲಿ ಆಂಬುಲೆನ್ಸ್ ಸಿಬ್ಬಂದಿಗೂ ಬಸವರಾಜ್ ಕರೆ ಮಾಡಿ, “ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದಾರೆ, ತಕ್ಷಣವೇ ಬಂದು ಆಸ್ಪತ್ರೆಗೆ ಕರೆದೊಯ್ಯಿ” ಎಂದು ಸುಳ್ಳು ಮಾಹಿತಿ ನೀಡಿದ. ಇದರ ಪರಿಣಾಮವಾಗಿ ಆಂಬುಲೆನ್ಸ್ ಸಿಬ್ಬಂದಿಯೂ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದರು. ಆದರೆ ಅಲ್ಲಿದ್ದದ್ದು ಬಿಕೋ ಎದೆಯಾದ ಬಸ್ ನಿಲ್ದಾಣ ಮಾತ್ರ!

“ನನ್ನನ್ನು ಹುಡುಕಿ!” – ಕುಡುಕನ ಸವಾಲ್

ಘಟನೆ ಬಗ್ಗೆ ಪೊಲೀಸರು ಮತ್ತೆ ಮತ್ತೆ ಬಸವರಾಜ್‌ಗೆ ಕರೆ ಮಾಡಿದರು. ಅದಕ್ಕೆ ಪ್ರತಿಯಾಗಿ ಕುಡುಕನು “ಭೂಮಿ ಮೇಲೆ, ಆಕಾಶದ ಕೆಳಗಿದ್ದೇನೆ! ಹಿಮ್ಮತ್ತಿದ್ದರೆ ನನ್ನನ್ನು ಹುಡುಕಿ!” ಎಂದು ತಿರುಗೇಟು ನೀಡಿದ. ಈ ಮಾತು ಕೇಳಿ ಪೊಲೀಸರ ಕೋಪ ಹೆಚ್ಚಾಗಿತ್ತು.

ಕೊನೆಗೂ ಕುಡುಕ ಪತ್ತೆ!

ಬಹುಶ್ರಮಪಟ್ಟು ಹುಡುಕಾಟ ನಡೆಸಿದ ಪೊಲೀಸರು ಕೊನೆಗೂ ಕುಡುಕ ಬಸವರಾಜ್‌ನನ್ನು ಪತ್ತೆಹಚ್ಚಿ, ಅವನಿಗೆ ಬುದ್ಧಿವಾದ ಹೇಳಿ ಬಿಡುಗಡೆ ಮಾಡಿದರು. ಆದರೆ ಈ ಅವಾಂತರದಿಂದ ಶೃಂಗೇರಿ ಪೊಲೀಸರಿಗೆ ಹಾಗೂ ಆಂಬುಲೆನ್ಸ್ ಸಿಬ್ಬಂದಿಗೆ ರಾತ್ರಿಯಿಡೀ ಪರದಾಟ ನಿಜವಾಗಿಯೂ ದೊಡ್ಡ ತಲೆನೋವಾಯಿತು!

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

8 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

9 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

9 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

9 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

9 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago