Categories: Latest

ಕುಡುಕನ ನಾಟಕದಿಂದ ಶೃಂಗೇರಿ ಪೊಲೀಸರ ಪರದಾಟ!

ಶೃಂಗೇರಿಯಲ್ಲಿ ಕುಡಿದ ಮತ್ತಿನಲ್ಲಿ ಒಬ್ಬ ವ್ಯಕ್ತಿ ಪೊಲೀಸರನ್ನೂ, ಆಂಬುಲೆನ್ಸ್ ಸಿಬ್ಬಂದಿಯನ್ನೂ ಕಂಗಾಲು ಗೊಳಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಗುಂಪು ಘರ್ಷಣೆಯ ಸುಳ್ಳು ಕರೆ ನೀಡಿ ರಾತ್ರಿಯಿಡೀ ಪೊಲೀಸ್ ಸಿಬ್ಬಂದಿ ಹಾಗೂ ವೈದ್ಯಕೀಯ ತಂಡವನ್ನು ಹರಿಯಾಡಿಸಿದ ಈ ವ್ಯಕ್ತಿ ಕೊನೆಗೆ ಪೊಲೀಸರ ಬುದ್ಧಿವಾದಕ್ಕೆ ಗುರಿಯಾಗಿದ್ದಾನೆ.

ಸುಳ್ಳು ಕರೆಗಳಿಂದ ಪೊಲೀಸರು ಪರದಾಟ

ಹಗರಿಬೊಮ್ಮನಹಳ್ಳಿಯಿಂದ ಕೂಲಿ ಕೆಲಸಕ್ಕಾಗಿ ಶೃಂಗೇರಿಗೆ ಬಂದಿದ್ದ ಬಸವರಾಜ್ ಎಂಬ ಮದ್ಯವ್ಯಸನಿ, ರಾತ್ರಿಯಲ್ಲಿ ಪೊಲೀಸರಿಗೆ ಕರೆ ಮಾಡಿ, “ಶೃಂಗೇರಿ ಬಸ್ ನಿಲ್ದಾಣದಲ್ಲಿ ಭಾರೀ ಗುಂಪು ಘರ್ಷಣೆ ನಡೆದಿದೆ” ಎಂದು ತುರ್ತು ಮಾಹಿತಿ ನೀಡಿದ. ಇದನ್ನೇ ನಂಬಿದ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿದರು.

ಇದೇ ಸಮಯದಲ್ಲಿ ಆಂಬುಲೆನ್ಸ್ ಸಿಬ್ಬಂದಿಗೂ ಬಸವರಾಜ್ ಕರೆ ಮಾಡಿ, “ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದಾರೆ, ತಕ್ಷಣವೇ ಬಂದು ಆಸ್ಪತ್ರೆಗೆ ಕರೆದೊಯ್ಯಿ” ಎಂದು ಸುಳ್ಳು ಮಾಹಿತಿ ನೀಡಿದ. ಇದರ ಪರಿಣಾಮವಾಗಿ ಆಂಬುಲೆನ್ಸ್ ಸಿಬ್ಬಂದಿಯೂ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದರು. ಆದರೆ ಅಲ್ಲಿದ್ದದ್ದು ಬಿಕೋ ಎದೆಯಾದ ಬಸ್ ನಿಲ್ದಾಣ ಮಾತ್ರ!

“ನನ್ನನ್ನು ಹುಡುಕಿ!” – ಕುಡುಕನ ಸವಾಲ್

ಘಟನೆ ಬಗ್ಗೆ ಪೊಲೀಸರು ಮತ್ತೆ ಮತ್ತೆ ಬಸವರಾಜ್‌ಗೆ ಕರೆ ಮಾಡಿದರು. ಅದಕ್ಕೆ ಪ್ರತಿಯಾಗಿ ಕುಡುಕನು “ಭೂಮಿ ಮೇಲೆ, ಆಕಾಶದ ಕೆಳಗಿದ್ದೇನೆ! ಹಿಮ್ಮತ್ತಿದ್ದರೆ ನನ್ನನ್ನು ಹುಡುಕಿ!” ಎಂದು ತಿರುಗೇಟು ನೀಡಿದ. ಈ ಮಾತು ಕೇಳಿ ಪೊಲೀಸರ ಕೋಪ ಹೆಚ್ಚಾಗಿತ್ತು.

ಕೊನೆಗೂ ಕುಡುಕ ಪತ್ತೆ!

ಬಹುಶ್ರಮಪಟ್ಟು ಹುಡುಕಾಟ ನಡೆಸಿದ ಪೊಲೀಸರು ಕೊನೆಗೂ ಕುಡುಕ ಬಸವರಾಜ್‌ನನ್ನು ಪತ್ತೆಹಚ್ಚಿ, ಅವನಿಗೆ ಬುದ್ಧಿವಾದ ಹೇಳಿ ಬಿಡುಗಡೆ ಮಾಡಿದರು. ಆದರೆ ಈ ಅವಾಂತರದಿಂದ ಶೃಂಗೇರಿ ಪೊಲೀಸರಿಗೆ ಹಾಗೂ ಆಂಬುಲೆನ್ಸ್ ಸಿಬ್ಬಂದಿಗೆ ರಾತ್ರಿಯಿಡೀ ಪರದಾಟ ನಿಜವಾಗಿಯೂ ದೊಡ್ಡ ತಲೆನೋವಾಯಿತು!

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

6 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

6 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

6 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

6 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago