Categories: Latest

ಕುಡುಕನ ನಾಟಕದಿಂದ ಶೃಂಗೇರಿ ಪೊಲೀಸರ ಪರದಾಟ!

ಶೃಂಗೇರಿಯಲ್ಲಿ ಕುಡಿದ ಮತ್ತಿನಲ್ಲಿ ಒಬ್ಬ ವ್ಯಕ್ತಿ ಪೊಲೀಸರನ್ನೂ, ಆಂಬುಲೆನ್ಸ್ ಸಿಬ್ಬಂದಿಯನ್ನೂ ಕಂಗಾಲು ಗೊಳಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಗುಂಪು ಘರ್ಷಣೆಯ ಸುಳ್ಳು ಕರೆ ನೀಡಿ ರಾತ್ರಿಯಿಡೀ ಪೊಲೀಸ್ ಸಿಬ್ಬಂದಿ ಹಾಗೂ ವೈದ್ಯಕೀಯ ತಂಡವನ್ನು ಹರಿಯಾಡಿಸಿದ ಈ ವ್ಯಕ್ತಿ ಕೊನೆಗೆ ಪೊಲೀಸರ ಬುದ್ಧಿವಾದಕ್ಕೆ ಗುರಿಯಾಗಿದ್ದಾನೆ.

ಸುಳ್ಳು ಕರೆಗಳಿಂದ ಪೊಲೀಸರು ಪರದಾಟ

ಹಗರಿಬೊಮ್ಮನಹಳ್ಳಿಯಿಂದ ಕೂಲಿ ಕೆಲಸಕ್ಕಾಗಿ ಶೃಂಗೇರಿಗೆ ಬಂದಿದ್ದ ಬಸವರಾಜ್ ಎಂಬ ಮದ್ಯವ್ಯಸನಿ, ರಾತ್ರಿಯಲ್ಲಿ ಪೊಲೀಸರಿಗೆ ಕರೆ ಮಾಡಿ, “ಶೃಂಗೇರಿ ಬಸ್ ನಿಲ್ದಾಣದಲ್ಲಿ ಭಾರೀ ಗುಂಪು ಘರ್ಷಣೆ ನಡೆದಿದೆ” ಎಂದು ತುರ್ತು ಮಾಹಿತಿ ನೀಡಿದ. ಇದನ್ನೇ ನಂಬಿದ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿದರು.

ಇದೇ ಸಮಯದಲ್ಲಿ ಆಂಬುಲೆನ್ಸ್ ಸಿಬ್ಬಂದಿಗೂ ಬಸವರಾಜ್ ಕರೆ ಮಾಡಿ, “ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದಾರೆ, ತಕ್ಷಣವೇ ಬಂದು ಆಸ್ಪತ್ರೆಗೆ ಕರೆದೊಯ್ಯಿ” ಎಂದು ಸುಳ್ಳು ಮಾಹಿತಿ ನೀಡಿದ. ಇದರ ಪರಿಣಾಮವಾಗಿ ಆಂಬುಲೆನ್ಸ್ ಸಿಬ್ಬಂದಿಯೂ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದರು. ಆದರೆ ಅಲ್ಲಿದ್ದದ್ದು ಬಿಕೋ ಎದೆಯಾದ ಬಸ್ ನಿಲ್ದಾಣ ಮಾತ್ರ!

“ನನ್ನನ್ನು ಹುಡುಕಿ!” – ಕುಡುಕನ ಸವಾಲ್

ಘಟನೆ ಬಗ್ಗೆ ಪೊಲೀಸರು ಮತ್ತೆ ಮತ್ತೆ ಬಸವರಾಜ್‌ಗೆ ಕರೆ ಮಾಡಿದರು. ಅದಕ್ಕೆ ಪ್ರತಿಯಾಗಿ ಕುಡುಕನು “ಭೂಮಿ ಮೇಲೆ, ಆಕಾಶದ ಕೆಳಗಿದ್ದೇನೆ! ಹಿಮ್ಮತ್ತಿದ್ದರೆ ನನ್ನನ್ನು ಹುಡುಕಿ!” ಎಂದು ತಿರುಗೇಟು ನೀಡಿದ. ಈ ಮಾತು ಕೇಳಿ ಪೊಲೀಸರ ಕೋಪ ಹೆಚ್ಚಾಗಿತ್ತು.

ಕೊನೆಗೂ ಕುಡುಕ ಪತ್ತೆ!

ಬಹುಶ್ರಮಪಟ್ಟು ಹುಡುಕಾಟ ನಡೆಸಿದ ಪೊಲೀಸರು ಕೊನೆಗೂ ಕುಡುಕ ಬಸವರಾಜ್‌ನನ್ನು ಪತ್ತೆಹಚ್ಚಿ, ಅವನಿಗೆ ಬುದ್ಧಿವಾದ ಹೇಳಿ ಬಿಡುಗಡೆ ಮಾಡಿದರು. ಆದರೆ ಈ ಅವಾಂತರದಿಂದ ಶೃಂಗೇರಿ ಪೊಲೀಸರಿಗೆ ಹಾಗೂ ಆಂಬುಲೆನ್ಸ್ ಸಿಬ್ಬಂದಿಗೆ ರಾತ್ರಿಯಿಡೀ ಪರದಾಟ ನಿಜವಾಗಿಯೂ ದೊಡ್ಡ ತಲೆನೋವಾಯಿತು!

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

17 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

22 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

22 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

22 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

22 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago