Categories: Latest

ಎಸ್‌ಎಸ್‌ಎಲ್‌ಸಿ ಹಿಂದಿಗೆ ಅಂಕ ಕಡ್ಡಾಯ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ. ಈ ಕುರಿತು ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 2025-26ನೇ ಸಾಲಿಗೆ ಹಿಂದಿ ವಿಷಯಕ್ಕೆ ಅಂಕಗಳನ್ನೇ ನೀಡಬೇಕೆಂದು ಸೂಚಿಸಿದೆ.

ನ್ಯಾಯಮೂರ್ತಿ ಇಂದಿರೇಶ್ ಅವರ ಪೀಠ ಈ ತೀರ್ಪು ನೀಡಿದ್ದು, ಪರೀಕ್ಷೆಯ ನಂತರ ನಿಯಮ ಬದಲಿಸುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಪರೀಕ್ಷೆಯ ಅಧಿಸೂಚನೆ ಹೊರಡಿಸುವ ಮೊದಲುಲೇ ಇಂತಹ ನಿಯಮಗಳನ್ನು ರೂಪಿಸಬೇಕಿತ್ತು ಎಂದು ನ್ಯಾಯಾಲಯ ತಿಳಿಸಿದೆ.

ಹಿಂದಿ ವಿಷಯದಲ್ಲಿ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದ ಹಿನ್ನೆಲೆ, ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಗ್ರೇಡ್ ಪದ್ದತಿಯನ್ನು ಜಾರಿಗೆ ತರಲು ನಿರ್ಧರಿಸಿತ್ತು. ಆದರೆ ಈ ಕ್ರಮವನ್ನು ನ್ಯಾಯಾಲಯ ಪ್ರಶ್ನಿಸಿ, ಪರೀಕ್ಷೆಯ ಬಳಿಕ ನಿಯಮ ಬದಲಾವಣೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದೆ.

“ಪಿಯುಸಿ ಪರೀಕ್ಷೆಯಲ್ಲಿ 83% ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿರುವಾಗ, ಎಸ್‌ಎಸ್‌ಎಲ್‌ಸಿಯಲ್ಲಿ ಎಲ್ಲರನ್ನೂ ಪಾಸ್ ಮಾಡಬೇಕೆಂದರೆ ಪರೀಕ್ಷೆಯ ಅರ್ಥವೇನು?” ಎಂದು ನ್ಯಾಯಾಲಯ ಪ್ರಶ್ನಿಸಿದೆ. ನಿಯಮ ರೂಪಿಸಿದ ಬಳಿಕವೇ ಪರೀಕ್ಷೆ ನಡೆಸಬೇಕಾಗಿತ್ತು ಎಂದು ಕೋರ್ಟ್ ಸೂಚಿಸಿದೆ.

ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ತಿದ್ದುಪಡಿ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ವಾದ ಮಂಡಿಸಿದರೂ, ನ್ಯಾಯಾಲಯ ಅದನ್ನು ಅಂಗೀಕರಿಸಲಿಲ್ಲ. ಇದರಿಂದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಇದೀಗ ತೀರ್ಪಿನ ಪ್ರಕಾರ, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಫಲಿತಾಂಶ ಪ್ರಕಟಿಸಬೇಕಿದೆ. ಏಪ್ರಿಲ್ 24ರಂದು ಫಲಿತಾಂಶ ಪ್ರಕಟಿಸುವ ಯೋಜನೆ ಇದ್ದು, ಪ್ರಕರಣ ಇತ್ಯರ್ಥಗೊಂಡಿರುವುದರಿಂದ ಶೀಘ್ರದಲ್ಲೇ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.

ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಉತ್ತರ ಪತ್ರಿಕೆಗಳಿಗೆ ಮೌಲ್ಯಮಾಪಕರು ಅಂಕಗಳನ್ನೇ ನಮೂದಿಸಿದ್ದಾರೆ.

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 8.30 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಇವರಲ್ಲಿ 4.25 ಲಕ್ಷ ಬಾಲಕರು ಮತ್ತು 4.05 ಲಕ್ಷ ಬಾಲಕಿಯರು ಸೇರಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

2 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

2 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

21 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago