Categories: Latest

ಎಸ್‌ಎಸ್‌ಎಲ್‌ಸಿ ಹಿಂದಿಗೆ ಅಂಕ ಕಡ್ಡಾಯ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ. ಈ ಕುರಿತು ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 2025-26ನೇ ಸಾಲಿಗೆ ಹಿಂದಿ ವಿಷಯಕ್ಕೆ ಅಂಕಗಳನ್ನೇ ನೀಡಬೇಕೆಂದು ಸೂಚಿಸಿದೆ.

ನ್ಯಾಯಮೂರ್ತಿ ಇಂದಿರೇಶ್ ಅವರ ಪೀಠ ಈ ತೀರ್ಪು ನೀಡಿದ್ದು, ಪರೀಕ್ಷೆಯ ನಂತರ ನಿಯಮ ಬದಲಿಸುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಪರೀಕ್ಷೆಯ ಅಧಿಸೂಚನೆ ಹೊರಡಿಸುವ ಮೊದಲುಲೇ ಇಂತಹ ನಿಯಮಗಳನ್ನು ರೂಪಿಸಬೇಕಿತ್ತು ಎಂದು ನ್ಯಾಯಾಲಯ ತಿಳಿಸಿದೆ.

ಹಿಂದಿ ವಿಷಯದಲ್ಲಿ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದ ಹಿನ್ನೆಲೆ, ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಗ್ರೇಡ್ ಪದ್ದತಿಯನ್ನು ಜಾರಿಗೆ ತರಲು ನಿರ್ಧರಿಸಿತ್ತು. ಆದರೆ ಈ ಕ್ರಮವನ್ನು ನ್ಯಾಯಾಲಯ ಪ್ರಶ್ನಿಸಿ, ಪರೀಕ್ಷೆಯ ಬಳಿಕ ನಿಯಮ ಬದಲಾವಣೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದೆ.

“ಪಿಯುಸಿ ಪರೀಕ್ಷೆಯಲ್ಲಿ 83% ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿರುವಾಗ, ಎಸ್‌ಎಸ್‌ಎಲ್‌ಸಿಯಲ್ಲಿ ಎಲ್ಲರನ್ನೂ ಪಾಸ್ ಮಾಡಬೇಕೆಂದರೆ ಪರೀಕ್ಷೆಯ ಅರ್ಥವೇನು?” ಎಂದು ನ್ಯಾಯಾಲಯ ಪ್ರಶ್ನಿಸಿದೆ. ನಿಯಮ ರೂಪಿಸಿದ ಬಳಿಕವೇ ಪರೀಕ್ಷೆ ನಡೆಸಬೇಕಾಗಿತ್ತು ಎಂದು ಕೋರ್ಟ್ ಸೂಚಿಸಿದೆ.

ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ತಿದ್ದುಪಡಿ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ವಾದ ಮಂಡಿಸಿದರೂ, ನ್ಯಾಯಾಲಯ ಅದನ್ನು ಅಂಗೀಕರಿಸಲಿಲ್ಲ. ಇದರಿಂದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಇದೀಗ ತೀರ್ಪಿನ ಪ್ರಕಾರ, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಫಲಿತಾಂಶ ಪ್ರಕಟಿಸಬೇಕಿದೆ. ಏಪ್ರಿಲ್ 24ರಂದು ಫಲಿತಾಂಶ ಪ್ರಕಟಿಸುವ ಯೋಜನೆ ಇದ್ದು, ಪ್ರಕರಣ ಇತ್ಯರ್ಥಗೊಂಡಿರುವುದರಿಂದ ಶೀಘ್ರದಲ್ಲೇ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.

ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಉತ್ತರ ಪತ್ರಿಕೆಗಳಿಗೆ ಮೌಲ್ಯಮಾಪಕರು ಅಂಕಗಳನ್ನೇ ನಮೂದಿಸಿದ್ದಾರೆ.

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 8.30 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಇವರಲ್ಲಿ 4.25 ಲಕ್ಷ ಬಾಲಕರು ಮತ್ತು 4.05 ಲಕ್ಷ ಬಾಲಕಿಯರು ಸೇರಿದ್ದಾರೆ.

ಭ್ರಷ್ಟರ ಬೇಟೆ

Recent Posts

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

6 hours ago

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

6 hours ago

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ: ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ – ಖಾಸಗಿ ಸೆಂಟರ್‌ಗಳ ನಿಯಮ ಉಲ್ಲಂಘನೆ ಬಯಲು

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ…

6 hours ago

ಮದ್ಯದ ದರ ಏರಿಕೆ ಶಾಕ್: ‘ಎಕಾನಮಿ’ ಬ್ರ್ಯಾಂಡ್‌ಗಳೇ ಹೆಚ್ಚು ದುಬಾರಿ

ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…

20 hours ago

ಬೇಸಿಗೆ ಬಿಸಿಗೆ ಬೈಕ್ ಟೈರ್ ಬ್ಲಾಸ್ಟ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದುರ್ಮರಣ

ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…

22 hours ago

ಶಿರಸಿ ವೈದ್ಯನ ಕೊಲೆ ರಹಸ್ಯ ಬಯಲು: ಮದುವೆ ಮುನ್ನವೇ ಸ್ನೇಹಿತನಿಂದ ಕ್ರೂರ ಹತ್ಯೆ.!

ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…

22 hours ago